Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...