Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...