Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...