Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...