Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...