Homeಕರ್ನಾಟಕಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

- Advertisement -
- Advertisement -

”ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ? ಪ್ರಮೋದ್ ಮುತಾಲಿಕ ಒಬ್ಬ ಡೀಲ್ ಮಾಸ್ಟರ್” ಎಂದು ಚುನಾವಣೆ ಬಳಿಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಸುನಿಲ್ ಮಾತನಾಡಿದ್ದು, ”ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಕಾಂಗ್ರೆಸ್‌ ಜತೆ ಸೇರಿಕೊಂಡು ಹಣ ಪಡೆದು ಬಿಜೆಪಿಯ ವಿರುದ್ಧ ಕಾರ್ಕಳದಲ್ಲಿ ಸ್ಪರ್ಧಿಸಿ ಸೋತಿರುವ ಪ್ರಮೋದ್ ಮುತಾಲಿಕ್ ಒರ್ವ ಡೀಲ್ ಮಾಸ್ಟರ್, ಹಣಕ್ಕಾಗಿ ಅವರು ಏನು ಬೇಕಾದರೂ ಮಾಡುವ ಮನಸ್ಥಿತಿಯುಳ್ಳವರು” ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಮೋದ್ ಮುತಾಲಿಕ್ ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು. ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು, ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ ದಾಖಲೆಗಳು ಬೇಕಾ?” ಎಂದು ಮುತಾಲಿಕ್‌ ಅವರನ್ನು ಪ್ರಶ್ನಿಸಿದರು.

”ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ನನ್ನ ವಿರುದ್ಧ ಸಾಕಷ್ಟು ಪ್ರತಿ ತಂತ್ರಗಳನ್ನು ಹೂಡಲಾಗಿತ್ತು. ಜನರಿಗೆ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಪ್ಪು ಮಾಹಿತಿ ನೀಡುತ್ತಾ ಜನರನ್ನು ನಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಜನ ಕೊನೆಯಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಇತ್ತ ಸುನಿಲ್ ಆರೋಪಗಳಿಗೆ ದೇವರೇ ಉತ್ತರ ನೀಡಬೇಕು ಎಂದು ಪ್ರಮೋದ್ ಮುತಾಲಿಕ್ ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

ಪ್ರಜಾಪ್ರಭುತ್ವ ಮೇಲೆ ನಂಬಿಕೆ ಹಾಗೂ ಕಾರ್ಕಳ ತಾಲೂಕಿನ ಅಭಿವೃದ್ಧಿಗೆ ಮತ ನೀಡಿದ್ದೀರಿ ಅದಕ್ಕಾಗಿ ಮತದಾರರಿಗೆ ಹಾಗೂ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.

ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್​ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ ಮುತಾಲಿಕ್, ಸುನಿಲ್ ವಿರುದ್ಧ ಹೊಸ ವಿವಾದಗಳನ್ನು ಸೃಷ್ಟಿಸಿದ್ದರು. ”ಅಭಿವೃದ್ಧಿ ಹೆಸರಿನಲ್ಲಿ ಕಾರ್ಕಳದಲ್ಲಿ ಸುನಿಲ್ ಕುಮಾರ್ ಏನು ಮಾಡಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ” ಎನ್ನುವ ದೂರುಗಳ ಜೊತೆ ಹಿಂದೂ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ. ದುರಹಂಕಾರದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...