Homeಕರ್ನಾಟಕಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

- Advertisement -
- Advertisement -

”ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ? ಪ್ರಮೋದ್ ಮುತಾಲಿಕ ಒಬ್ಬ ಡೀಲ್ ಮಾಸ್ಟರ್” ಎಂದು ಚುನಾವಣೆ ಬಳಿಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಸುನಿಲ್ ಮಾತನಾಡಿದ್ದು, ”ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಕಾಂಗ್ರೆಸ್‌ ಜತೆ ಸೇರಿಕೊಂಡು ಹಣ ಪಡೆದು ಬಿಜೆಪಿಯ ವಿರುದ್ಧ ಕಾರ್ಕಳದಲ್ಲಿ ಸ್ಪರ್ಧಿಸಿ ಸೋತಿರುವ ಪ್ರಮೋದ್ ಮುತಾಲಿಕ್ ಒರ್ವ ಡೀಲ್ ಮಾಸ್ಟರ್, ಹಣಕ್ಕಾಗಿ ಅವರು ಏನು ಬೇಕಾದರೂ ಮಾಡುವ ಮನಸ್ಥಿತಿಯುಳ್ಳವರು” ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಮೋದ್ ಮುತಾಲಿಕ್ ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು. ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು, ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ ದಾಖಲೆಗಳು ಬೇಕಾ?” ಎಂದು ಮುತಾಲಿಕ್‌ ಅವರನ್ನು ಪ್ರಶ್ನಿಸಿದರು.

”ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ನನ್ನ ವಿರುದ್ಧ ಸಾಕಷ್ಟು ಪ್ರತಿ ತಂತ್ರಗಳನ್ನು ಹೂಡಲಾಗಿತ್ತು. ಜನರಿಗೆ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಪ್ಪು ಮಾಹಿತಿ ನೀಡುತ್ತಾ ಜನರನ್ನು ನಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಜನ ಕೊನೆಯಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಇತ್ತ ಸುನಿಲ್ ಆರೋಪಗಳಿಗೆ ದೇವರೇ ಉತ್ತರ ನೀಡಬೇಕು ಎಂದು ಪ್ರಮೋದ್ ಮುತಾಲಿಕ್ ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

ಪ್ರಜಾಪ್ರಭುತ್ವ ಮೇಲೆ ನಂಬಿಕೆ ಹಾಗೂ ಕಾರ್ಕಳ ತಾಲೂಕಿನ ಅಭಿವೃದ್ಧಿಗೆ ಮತ ನೀಡಿದ್ದೀರಿ ಅದಕ್ಕಾಗಿ ಮತದಾರರಿಗೆ ಹಾಗೂ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.

ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್​ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ ಮುತಾಲಿಕ್, ಸುನಿಲ್ ವಿರುದ್ಧ ಹೊಸ ವಿವಾದಗಳನ್ನು ಸೃಷ್ಟಿಸಿದ್ದರು. ”ಅಭಿವೃದ್ಧಿ ಹೆಸರಿನಲ್ಲಿ ಕಾರ್ಕಳದಲ್ಲಿ ಸುನಿಲ್ ಕುಮಾರ್ ಏನು ಮಾಡಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ” ಎನ್ನುವ ದೂರುಗಳ ಜೊತೆ ಹಿಂದೂ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ. ದುರಹಂಕಾರದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...