Homeಕರ್ನಾಟಕಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

- Advertisement -
- Advertisement -

”ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ? ಪ್ರಮೋದ್ ಮುತಾಲಿಕ ಒಬ್ಬ ಡೀಲ್ ಮಾಸ್ಟರ್” ಎಂದು ಚುನಾವಣೆ ಬಳಿಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಸುನಿಲ್ ಮಾತನಾಡಿದ್ದು, ”ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಕಾಂಗ್ರೆಸ್‌ ಜತೆ ಸೇರಿಕೊಂಡು ಹಣ ಪಡೆದು ಬಿಜೆಪಿಯ ವಿರುದ್ಧ ಕಾರ್ಕಳದಲ್ಲಿ ಸ್ಪರ್ಧಿಸಿ ಸೋತಿರುವ ಪ್ರಮೋದ್ ಮುತಾಲಿಕ್ ಒರ್ವ ಡೀಲ್ ಮಾಸ್ಟರ್, ಹಣಕ್ಕಾಗಿ ಅವರು ಏನು ಬೇಕಾದರೂ ಮಾಡುವ ಮನಸ್ಥಿತಿಯುಳ್ಳವರು” ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಮೋದ್ ಮುತಾಲಿಕ್ ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು. ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು, ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ ದಾಖಲೆಗಳು ಬೇಕಾ?” ಎಂದು ಮುತಾಲಿಕ್‌ ಅವರನ್ನು ಪ್ರಶ್ನಿಸಿದರು.

”ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ನನ್ನ ವಿರುದ್ಧ ಸಾಕಷ್ಟು ಪ್ರತಿ ತಂತ್ರಗಳನ್ನು ಹೂಡಲಾಗಿತ್ತು. ಜನರಿಗೆ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಪ್ಪು ಮಾಹಿತಿ ನೀಡುತ್ತಾ ಜನರನ್ನು ನಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಜನ ಕೊನೆಯಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಇತ್ತ ಸುನಿಲ್ ಆರೋಪಗಳಿಗೆ ದೇವರೇ ಉತ್ತರ ನೀಡಬೇಕು ಎಂದು ಪ್ರಮೋದ್ ಮುತಾಲಿಕ್ ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

ಪ್ರಜಾಪ್ರಭುತ್ವ ಮೇಲೆ ನಂಬಿಕೆ ಹಾಗೂ ಕಾರ್ಕಳ ತಾಲೂಕಿನ ಅಭಿವೃದ್ಧಿಗೆ ಮತ ನೀಡಿದ್ದೀರಿ ಅದಕ್ಕಾಗಿ ಮತದಾರರಿಗೆ ಹಾಗೂ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.

ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್​ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ ಮುತಾಲಿಕ್, ಸುನಿಲ್ ವಿರುದ್ಧ ಹೊಸ ವಿವಾದಗಳನ್ನು ಸೃಷ್ಟಿಸಿದ್ದರು. ”ಅಭಿವೃದ್ಧಿ ಹೆಸರಿನಲ್ಲಿ ಕಾರ್ಕಳದಲ್ಲಿ ಸುನಿಲ್ ಕುಮಾರ್ ಏನು ಮಾಡಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ” ಎನ್ನುವ ದೂರುಗಳ ಜೊತೆ ಹಿಂದೂ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ. ದುರಹಂಕಾರದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...