Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...