Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...