Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...