Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...