Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....