Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...