Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...