Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...