Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...