Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...