Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...