Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...