Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...