Homeಮುಖಪುಟಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...