Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...