Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...