Homeಕರ್ನಾಟಕಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

ಪ್ರಧಾನಿಯಾಗಿ ಪ್ರಣಬ್ ಮುಖರ್ಜಿ: ಈ ‘ಮಾಹಿತಿ’ ನಿಜವಾಗಬಹುದೇ?

 ಪ್ರಣಬ್ ಮುಖರ್ಜಿ ಮಾತ್ರ ಸರ್ವಸಮ್ಮತ ಅಭ್ಯರ್ಥಿ ಎಂಬುದು ಚಂದ್ರಬಾಬು ನಾಯ್ಡು ಅವರ ಪ್ರಸ್ತಾಪವಂತೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಇಂತಹ ಆಶ್ಚರ್ಯಕರವಾದ ಸುದ್ದಿಯೊಂದು ನಮಗೆ ತಲುಪಿದೆ. ಚಂದ್ರಬಾಬು ನಾಯ್ಡು ನಡೆಸುತ್ತಿರುವ ರಾಯಭಾರದ ನಡುವೆ ಪ್ರಧಾನಿ ಪಟ್ಟಕ್ಕೆ ಮೇಲೆದ್ದಿರುವ ಹೆಸರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ನಿನ್ನೆ ದಿನ ದಿಢೀರನೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ಹೋದರು. ದೆಹಲಿಯಲ್ಲಿ ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ 22 ಪ್ರತಿಪಕ್ಷಗಳ ನಿಯೋಗದಲ್ಲಿ ಜೆಡಿಎಸ್ ಮುಖಂಡರುಗಳು ಹಾಜರಿರಲಿಲ್ಲ. ದೆಹಲಿಗೆ ಹೋಗುವುದನ್ನೂ ದೇವೇಗೌಡರು ಮತ್ತು ಎಚ್‍ಡಿಕೆ ರದ್ದು ಮಾಡಿದ್ದರು. ಅದನ್ನು ಕಾಂಗ್ರೆಸ್ ವಿರುದ್ಧದ ಮುನಿಸು ಎಂದೇ ಅರ್ಥೈಸಲಾಗುತ್ತಿದೆ. ಆದರೆ, ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಚರ್ಚಿಸಿರುವ ನಾಯ್ಡು ದೇವೇಗೌಡರ ಜೊತೆ ಅಂತಿಮ ಚರ್ಚೆ ಮಾಡಲೇಬೇಕಿತ್ತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದರು.

ಈ ಚರ್ಚೆಯಲ್ಲಿ ಬಂದ ಪ್ರಮುಖ ವಿಷಯವೆಂದರೆ, ಪ್ರತಿಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣಬ್ ಮುಖರ್ಜಿಯವರನ್ನು ಆಯ್ಕೆ ಮಾಡುವುದು. ಇದು ನಾನುಗೌರಿ.ಕಾಂಗೆ ತಿಳಿದು ಬಂದಿರುವ ಮಾಹಿತಿ. ಅಷ್ಟೇ ಅಲ್ಲದೇ, ಎಲ್ಲಾ ಎಕ್ಸಿಟ್ ಪೋಲ್‍ಗಳ ನಂತರವೂ ನಾಯ್ಡು ಮತ್ತಿತರರು, ನರೇಂದ್ರ ಮೋದಿ ಸೋಲಿನ ಕುರಿತು ಬಹಳ ವಿಶ್ವಾಸ ಹೊಂದಿದ್ದಾರೆ. ಯಾವುದೇ ಕಾರಣಕ್ಕೂ ಎನ್‍ಡಿಎಗೆ 200ಕ್ಕಿಂತ ಹೆಚ್ಚು ಸೀಟುಗಳು ಬರುವುದಿಲ್ಲ ಎಂಬುದು ಅವರುಗಳ ಖಚಿತ ಅಭಿಪ್ರಾಯವಂತೆ.

ಇವೆರಡೂ ಸಹಾ ಆಶ್ಚರ್ಯಕರ ಸಂಗತಿಗಳೇ. ಏಕೆಂದರೆ ಎನ್‍ಡಿಎಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಾರ್ಹವೇ. ಆದರೆ ಬಹುತೇಕ ಎಲ್ಲಾ ಸಮೀಕ್ಷೆಗಳೂ ಎನ್‍ಡಿಎಗೆ ಬಹುಮತವನ್ನಂತೂ ಅಂದಾಜು ಮಾಡಿವೆ.

ಇದನ್ನು ಓದಿ: ಆಂಧ್ರ ಚುನಾವಣೆ: ಮಂಕಾದ `ಚಂದ್ರ’ನ ಮುಂದೆ ಜಗನ್ `ಮಿಂಚು’!

ಎರಡನೆಯದಾಗಿ, ದೇಶದ ರಾಷ್ಟ್ರಪತಿಯಾಗಿದ್ದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಒಪ್ಪಿಕೊಳ್ಳುತ್ತಾರೆಯೇ ಎಂಬುದೂ ಸಹಾ ಸಂದೇಹಾಸ್ಪದ. ರಾಷ್ಟ್ರಪತಿ ಸ್ಥಾನವು ಸಾಂಕೇತಿಕ ಮಹತ್ವವನ್ನಷ್ಟೇ ಹೊಂದಿದ್ದು, ದಿನನಿತ್ಯದ ಆಡಳಿತದಲ್ಲಿ ಹೆಚ್ಚಿನ ಪಾತ್ರ ಹೊಂದಿಲ್ಲ. ಆದರೂ ಭಾರತದ ಪ್ರಜಾಪ್ರಭುತ್ವದಲ್ಲಿ ಅದನ್ನು ಅತ್ಯುನ್ನತ ಸ್ಥಾನವೆಂದು ಪರಿಗಣಿಸಲಾಗಿದ್ದು, ಪ್ರಧಾನಿ ಸ್ಥಾನವು ಅದಕ್ಕಿಂತ ಕೆಳಗಿನದ್ದು. ರಾಷ್ಟ್ರಪತಿಯಾಗಿರುವವರು ಆಯ್ಕೆಯಾದ ನಂತರ ರಾಜಕೀಯ ಒಲವು-ನಿಲುವುಗಳಿಂದ ದೂರ ಇರಬೇಕೆಂದು ನಿರೀಕ್ಷಿಸಲಾಗುತ್ತದೆ.

ಆದರೆ, ಎಲ್ಲಾ ಪ್ರತಿಪಕ್ಷಗಳಿಗೂ ಸರ್ವಸಮ್ಮತವಾಗುವ ಅಭ್ಯರ್ಥಿಯೆಂದರೆ ಅದು ಪ್ರಣಬ್ ಮುಖರ್ಜಿಯೇ ಎಂಬುದು ಅವರ ಹೆಸರನ್ನು ಮುಂದಿಡುತ್ತಿರುವವರ ಅಭಿಪ್ರಾಯವಾಗಿದೆಯಂತೆ. ಒಮ್ಮೆ ಪ್ರಧಾನಿಯಾಗಬೇಕು ಎಂಬ ಬಯಕೆಯನ್ನು ಹೊಂದಿದ್ದ ಮುಖರ್ಜಿಯವರಿಗೆ ಈಗ ‘ರಾಷ್ಟ್ರದ ಹಿತಾಸಕ್ತಿ’ಯಿಂದ ಸಂಪ್ರದಾಯ ಬದಿಗಿಡಬೇಕು ಎಂಬ ಒತ್ತಡ ಹೇರಲಾಗಿದೆಯೆಂತೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‍ರನ್ನೂ ಈ ವಿಚಾರಕ್ಕೆ ಒಪ್ಪಿಸಲಾಗಿದೆಯೆಂದು ಹೇಳಲಾಗುತ್ತಿದೆ.

ಈ ಹಂತದಲ್ಲಂತೂ ಇದು ಕೇವಲ ವದಂತಿಯೆಂಬಷ್ಟು ತೂಕ ಮಾತ್ರ ಹೊಂದಿರುವ ಸುದ್ದಿಯಾಗಿದೆ. ಆದರೆ, ಇಂತಹ ಸುದ್ದಿಯು ನಾಯ್ಡು ಅವರು ಬೆಂಗಳೂರಿಗೆ ಬಂದು ಹೋದ ನಂತರ ಕೆಲವು ವಲಯಗಳಲ್ಲಿ ಗಾಢವಾಗಿ ಹಬ್ಬಿರುವುದಂತೂ ವಾಸ್ತವ. ‘ರಾಜಕಾರಣದ ಒಳಸುಳಿ’ಗಳು ಯಾವ್ಯಾವ ತಿರುವುಗಳನ್ನು ತೆಗೆದುಕೊಳ್ಳುತ್ತದೇ ಹೇಳಲಾಗುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಇರಬಹುದೇನೋ ಎಂದುಕೊಳ್ಳಬಹುದಾದ ‘ಮಾಹಿತಿ’ ಇದಾಗಿದೆ.

ಇದನ್ನು ಓದಿ: ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...