Homeಕರ್ನಾಟಕಪ್ರಣವ್ ಮೊಹಾಂತಿ ವರ್ಗಾವಣೆ ತೀರ್ಮಾನವಾಗಿಲ್ಲ, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶವೇ ಮುಖ್ಯ: ಗೃಹ ಸಚಿವ ಪರಮೇಶ್ವರ್

ಪ್ರಣವ್ ಮೊಹಾಂತಿ ವರ್ಗಾವಣೆ ತೀರ್ಮಾನವಾಗಿಲ್ಲ, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶವೇ ಮುಖ್ಯ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ (SIT) ಮುಖ್ಯಸ್ಥ, ಡಿಜಿಪಿ ಪ್ರಣವ್ ಮೊಹಾಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ ನಿಯೋಜಿತ ಪಟ್ಟಿಯಲ್ಲಿ ಅವರ ಹೆಸರಿದ್ದರೂ, ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಿಸಬೇಕೆಂದು ಸರ್ಕಾರ ತೀರ್ಮಾನಿಸಿತ್ತು. ಅದರಂತೆ ಪ್ರಣವ್ ಮೊಹಾಂತಿಯವರನ್ನು ನೇಮಿಸಲಾಯಿತು. ಆದರೆ, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಈ ವಿಚಾರದಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ತಪ್ಪುಕಲ್ಪನೆಗಳನ್ನು ಹರಡಲಾಗುತ್ತಿದೆ, ಇದು ಸರಿಯಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಧರ್ಮಸ್ಥಳ ಪ್ರಕರಣ: ರಾಜಕೀಯ ಹಸ್ತಕ್ಷೇಪ ಇಲ್ಲ

ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶ ಹೊರಬರುವುದಷ್ಟೇ ಸರ್ಕಾರದ ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿಯೇ ಎಸ್‌ಐಟಿ ರಚಿಸಲಾಗಿದೆ. ತನಿಖೆ ಪಾರದರ್ಶಕವಾಗಿ ನಡೆಯಬೇಕು ಮತ್ತು ವರದಿ ಸಲ್ಲಿಸಿದ ನಂತರ ಸತ್ಯಾಸತ್ಯತೆ ಹೊರಬರಬೇಕು ಎನ್ನುವುದು ಸರ್ಕಾರದ ನಿಲುವಾಗಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಯಾರನ್ನೂ ರಕ್ಷಿಸುವ ಅಥವಾ ಸಿಕ್ಕಿಹಾಕಿಸುವ ಅಜೆಂಡಾ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಸಚಿವರು ಖಚಿತಪಡಿಸಿದರು. ಯಾರು ಕೂಡ ಈ ವಿಷಯವನ್ನು ತಪ್ಪು ಭಾವನೆಯಿಂದ ನೋಡಬಾರದು ಎಂದು ಅವರು ಮನವಿ ಮಾಡಿದರು.

ಒಳ ಮೀಸಲಾತಿ ಮತ್ತು ಇತರ ವಿಷಯಗಳು

ಒಳ ಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸುವ ಮೊದಲು ಒಳಪಂಗಡಗಳೊಂದಿಗೆ ಚರ್ಚೆ ನಡೆಸಲು ಸಭೆ ಕರೆದಿರುವುದಾಗಿ ಗೃಹ ಸಚಿವರು ತಿಳಿಸಿದರು. ಈ ವಿಚಾರದಲ್ಲಿ ಯಾರಿಗೂ ಬೇಸರವಾಗುವುದು ಬೇಡ, ನಮ್ಮಲ್ಲಿರುವ ಅಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ವರದಿ ಇನ್ನೂ ಸಲ್ಲಿಸಿಲ್ಲ, ಶೀಘ್ರದಲ್ಲೇ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಶಾಸಕರು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡಿಕೊಳ್ಳುವುದಕ್ಕೆ ಯಾರು ಬ್ರೇಕ್ ಹಾಕುವುದಿಲ್ಲ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಟೋಯಿಂಗ್ ಪುನರಾರಂಭ: ಬೆಂಗಳೂರು ನಗರದಲ್ಲಿ ಇಲಾಖೆ ವತಿಯಿಂದಲೇ ಟೋಯಿಂಗ್ ಸೇವೆ ಪುನರಾರಂಭಿಸುವುದಾಗಿ ಸಚಿವರು ಘೋಷಿಸಿದರು. ಈ ಹಿಂದೆ ಗುತ್ತಿಗೆ ಕಂಪನಿಗಳಿಗೆ ನೀಡಲಾಗಿದ್ದ ಟೋಯಿಂಗ್ ಅನ್ನು ಇನ್ನು ಮುಂದೆ ಪೊಲೀಸರೇ ನಿರ್ವಹಿಸಲಿದ್ದಾರೆ. ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಜನರ ಓಡಾಟಕ್ಕೆ ಇವೆ, ಪಾರ್ಕಿಂಗ್‌ಗೆ ಅಲ್ಲ. ಪೊಲೀಸರು ಮಾನವೀಯತೆಯಿಂದ ವರ್ತಿಸುವಂತೆ ಸೂಚಿಸುವುದಾಗಿ ತಿಳಿಸಿದರು. ಜಟಾಪಟಿ ಉಂಟಾದರೆ ಕಾನೂನು ಬಳಸಲು ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಇತರೆ ಸುರಕ್ಷತಾ ಕ್ರಮಗಳು: ರಾಹುಲ್ ಗಾಂಧಿಯವರ ಭೇಟಿಗಾಗಿ ಪೊಲೀಸರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ‘Z+’ ಭದ್ರತೆ ಒದಗಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸ್ಲೀಪರ್ ಸೆಲ್‌ಗಳ ಬಗ್ಗೆ ತನಿಖಾ ಏಜೆನ್ಸಿಗಳು ಪತ್ತೆಹಚ್ಚಿವೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ, ಅಲ್-ಖೈದಾ ಸಂಪರ್ಕ ಹೊಂದಿದ್ದ ಮಹಿಳೆ ಕರ್ನಾಟಕದವರಲ್ಲ ಮತ್ತು ತನಿಖಾ ಸಂಸ್ಥೆಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ MDMA ತಯಾರಿಸುತ್ತಿದ್ದ ಆರೋಪಿಗಳು 20 ದಿನದ ಹಿಂದೆ ಮುಂಬೈಯಿಂದ ಬಂದಿದ್ದರು, ಅಲ್ಲಿನ ಸುಳಿವಿನ ಮೇರೆಗೆ ನಮ್ಮ ಪೊಲೀಸರು ಅವರನ್ನು ಹಿಡಿದಿದ್ದಾರೆ ಎಂದು ತಿಳಿಸಿದರು. ಇದು ದೇಶಾದ್ಯಂತ ನಡೆಯುವ ಪ್ರಕ್ರಿಯೆ ಎಂದು ಅವರು ಸ್ಪಷ್ಟಪಡಿಸಿದರು.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...