Homeಕರ್ನಾಟಕಪ್ರಣವ್ ಮೊಹಾಂತಿ ವರ್ಗಾವಣೆ ತೀರ್ಮಾನವಾಗಿಲ್ಲ, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶವೇ ಮುಖ್ಯ: ಗೃಹ ಸಚಿವ ಪರಮೇಶ್ವರ್

ಪ್ರಣವ್ ಮೊಹಾಂತಿ ವರ್ಗಾವಣೆ ತೀರ್ಮಾನವಾಗಿಲ್ಲ, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶವೇ ಮುಖ್ಯ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ (SIT) ಮುಖ್ಯಸ್ಥ, ಡಿಜಿಪಿ ಪ್ರಣವ್ ಮೊಹಾಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ ನಿಯೋಜಿತ ಪಟ್ಟಿಯಲ್ಲಿ ಅವರ ಹೆಸರಿದ್ದರೂ, ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಿಸಬೇಕೆಂದು ಸರ್ಕಾರ ತೀರ್ಮಾನಿಸಿತ್ತು. ಅದರಂತೆ ಪ್ರಣವ್ ಮೊಹಾಂತಿಯವರನ್ನು ನೇಮಿಸಲಾಯಿತು. ಆದರೆ, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಈ ವಿಚಾರದಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ತಪ್ಪುಕಲ್ಪನೆಗಳನ್ನು ಹರಡಲಾಗುತ್ತಿದೆ, ಇದು ಸರಿಯಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಧರ್ಮಸ್ಥಳ ಪ್ರಕರಣ: ರಾಜಕೀಯ ಹಸ್ತಕ್ಷೇಪ ಇಲ್ಲ

ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಾಂಶ ಹೊರಬರುವುದಷ್ಟೇ ಸರ್ಕಾರದ ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿಯೇ ಎಸ್‌ಐಟಿ ರಚಿಸಲಾಗಿದೆ. ತನಿಖೆ ಪಾರದರ್ಶಕವಾಗಿ ನಡೆಯಬೇಕು ಮತ್ತು ವರದಿ ಸಲ್ಲಿಸಿದ ನಂತರ ಸತ್ಯಾಸತ್ಯತೆ ಹೊರಬರಬೇಕು ಎನ್ನುವುದು ಸರ್ಕಾರದ ನಿಲುವಾಗಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಯಾರನ್ನೂ ರಕ್ಷಿಸುವ ಅಥವಾ ಸಿಕ್ಕಿಹಾಕಿಸುವ ಅಜೆಂಡಾ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಸಚಿವರು ಖಚಿತಪಡಿಸಿದರು. ಯಾರು ಕೂಡ ಈ ವಿಷಯವನ್ನು ತಪ್ಪು ಭಾವನೆಯಿಂದ ನೋಡಬಾರದು ಎಂದು ಅವರು ಮನವಿ ಮಾಡಿದರು.

ಒಳ ಮೀಸಲಾತಿ ಮತ್ತು ಇತರ ವಿಷಯಗಳು

ಒಳ ಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸುವ ಮೊದಲು ಒಳಪಂಗಡಗಳೊಂದಿಗೆ ಚರ್ಚೆ ನಡೆಸಲು ಸಭೆ ಕರೆದಿರುವುದಾಗಿ ಗೃಹ ಸಚಿವರು ತಿಳಿಸಿದರು. ಈ ವಿಚಾರದಲ್ಲಿ ಯಾರಿಗೂ ಬೇಸರವಾಗುವುದು ಬೇಡ, ನಮ್ಮಲ್ಲಿರುವ ಅಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ವರದಿ ಇನ್ನೂ ಸಲ್ಲಿಸಿಲ್ಲ, ಶೀಘ್ರದಲ್ಲೇ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಶಾಸಕರು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡಿಕೊಳ್ಳುವುದಕ್ಕೆ ಯಾರು ಬ್ರೇಕ್ ಹಾಕುವುದಿಲ್ಲ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಟೋಯಿಂಗ್ ಪುನರಾರಂಭ: ಬೆಂಗಳೂರು ನಗರದಲ್ಲಿ ಇಲಾಖೆ ವತಿಯಿಂದಲೇ ಟೋಯಿಂಗ್ ಸೇವೆ ಪುನರಾರಂಭಿಸುವುದಾಗಿ ಸಚಿವರು ಘೋಷಿಸಿದರು. ಈ ಹಿಂದೆ ಗುತ್ತಿಗೆ ಕಂಪನಿಗಳಿಗೆ ನೀಡಲಾಗಿದ್ದ ಟೋಯಿಂಗ್ ಅನ್ನು ಇನ್ನು ಮುಂದೆ ಪೊಲೀಸರೇ ನಿರ್ವಹಿಸಲಿದ್ದಾರೆ. ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಜನರ ಓಡಾಟಕ್ಕೆ ಇವೆ, ಪಾರ್ಕಿಂಗ್‌ಗೆ ಅಲ್ಲ. ಪೊಲೀಸರು ಮಾನವೀಯತೆಯಿಂದ ವರ್ತಿಸುವಂತೆ ಸೂಚಿಸುವುದಾಗಿ ತಿಳಿಸಿದರು. ಜಟಾಪಟಿ ಉಂಟಾದರೆ ಕಾನೂನು ಬಳಸಲು ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಇತರೆ ಸುರಕ್ಷತಾ ಕ್ರಮಗಳು: ರಾಹುಲ್ ಗಾಂಧಿಯವರ ಭೇಟಿಗಾಗಿ ಪೊಲೀಸರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ‘Z+’ ಭದ್ರತೆ ಒದಗಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸ್ಲೀಪರ್ ಸೆಲ್‌ಗಳ ಬಗ್ಗೆ ತನಿಖಾ ಏಜೆನ್ಸಿಗಳು ಪತ್ತೆಹಚ್ಚಿವೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ, ಅಲ್-ಖೈದಾ ಸಂಪರ್ಕ ಹೊಂದಿದ್ದ ಮಹಿಳೆ ಕರ್ನಾಟಕದವರಲ್ಲ ಮತ್ತು ತನಿಖಾ ಸಂಸ್ಥೆಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ MDMA ತಯಾರಿಸುತ್ತಿದ್ದ ಆರೋಪಿಗಳು 20 ದಿನದ ಹಿಂದೆ ಮುಂಬೈಯಿಂದ ಬಂದಿದ್ದರು, ಅಲ್ಲಿನ ಸುಳಿವಿನ ಮೇರೆಗೆ ನಮ್ಮ ಪೊಲೀಸರು ಅವರನ್ನು ಹಿಡಿದಿದ್ದಾರೆ ಎಂದು ತಿಳಿಸಿದರು. ಇದು ದೇಶಾದ್ಯಂತ ನಡೆಯುವ ಪ್ರಕ್ರಿಯೆ ಎಂದು ಅವರು ಸ್ಪಷ್ಟಪಡಿಸಿದರು.

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...