Homeಮುಖಪುಟಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

- Advertisement -
- Advertisement -

ಕಳೆದ ವರ್ಷ ನಲ್ಗೋಂಡ ಜಿಲ್ಲೆಯ ಮಿರ್ಯಾಲ ಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.

ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮತ್ತು ಆತನ ಗೂಂಡಾಗಳು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇಡೀ ದೇಶ ಈ ಹತ್ಯೆಯಿಂದ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಈ ಸನ್ನಿವೇಶವನ್ನು ಅಮೃತ ಸಹ ದಿಟ್ಟತನದಿಂದ ಎದುರಿಸಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಲ್ಲದೇ ಮೃತ ಗಂಡನ ಕುಟುಂಬದ ಜೊತೆಯೇ ಇದ್ದು ತಂದೆಯ ವಿರುದ್ಧ ಕಾನೂನು ಸಮರ ಸಾರಿದ್ದಳು. ಬಹಳಷ್ಟು ಜನರಿಗೆ ಅಂತರ್ಜಾತಿ ಮದುವೆಯಾಗಿ ಕುಟುಂಬವನ್ನು ಎದುರಿಸುವ ಬಗ್ಗೆ ಸ್ಫೂರ್ತಿಯಾಗಿ ಆಕೆ ನಿಂತಿದ್ದಾಳೆ. ಈಗ ಅಮೃತಾಳಿಗೆ ಮುದ್ದಾದ ಗಂಡುಮಗು ಜನಿಸಿದ್ದು ಆ ಮಗುವಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಆದರೆ ಪ್ರಣಯ್‌ ಹತ್ಯೆಯ ಪ್ರತ್ಯಕ್ಷ ಸಾಕ್ಷಿ ಅಮೃತಳೇ ಆಗಿದ್ದು, ಇತ್ತಿಚಿಗೆ ಕೋರ್ಟಿನಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳದಂತೆ ತಂದೆ ಮಾರುತಿರಾವ್ ಮತ್ತು ತನ್ನ ಬೆಂಬಲಿಗ ಕರೀಂ ಸೇರಿ ಅಮೃತಾಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಂದೆ ಮಾರುತಿರಾವ್ ನೊಂದಿಗೆ ಅಮೃತ

ಪ್ರಣಯ್‌ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದ ಮಾರುತಿರಾವ್ ಏಪ್ರಿಲ್‌ನಲ್ಲಿ ಬೇಲ್‌ ಮೇಲೆ ಹೊರಬಂದಿದ್ದಾನೆ. ಅದಾದ ಆರು ತಿಂಗಳಲ್ಲಿಯೇ ತನ್ನ ಸ್ನೇಹಿತ ಕಂದುಲ ವೆಂಕಟೇಶ್ವರರಾವ್‌ನನ್ನು ಅಮೃತ ವರ್ಷಿಣಿ ಜೊತೆ ಮಾತುಕತೆ ಕಳುಹಿಸಿದ್ದಾನೆ.

ವೆಂಕಟೇಶ್ವರಾವ್ ‘ನಿಮ್ಮ ತಂದೆ ಹೇಳಿದ ಹಾಗೆ ನೀನು ನಡೆದುಕೊಂಡರೆ ನಿಮ್ಮ ತಂದೆಯ ಆಸ್ತಿಯನ್ನೆಲ್ಲ ನಿನಗೆ ಬರೆದುಕೊಡಲಿದ್ದಾರೆ. ಆತನಿಗೆ ಇಷ್ಟವಾದ ವ್ಯಕ್ತಿಯನ್ನು ನೀನು ಮದುವೆ ಆದರೆ ಎಲ್ಲಾ ಆಸ್ತಿಯು ನಿನಗೆ ಸೇರುತ್ತದೆ ಎಂದು ಆಮಿಷ ಒಡ್ಡಿದ್ದಾನೆ. ಆದರೆ ತನ್ನ ಪತಿಯ ಹತ್ಯೆಯಿಂದ ಆಕ್ರೋಶಿತರಾಗಿರುವ ಅಮೃತಾ ಈ ಪ್ರಸ್ತಾಪವನ್ನು ತಿರಸ್ಕರಿಸಿ ವೆಂಕಟೇಶ್ವರಾವ್ ನನ್ನು ಮನೆಯಿಂದ ವಾಪಸ್ಸು ಕಳುಹಿಸಿದ್ದಾಳೆ.

ಮಗುವಿನೊಂದಿಗೆ ಅಮೃತ

ಇದರಿಂದ ಕುಪಿತಗೊಂಡಿರುವ ಆಕೆಯ ತಂದೆ ನಾನು ಹೇಳಿದಂತೆ ಕೇಳದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ, ನಿನಗೆ ತೊಂದರೆ ತಪ್ಪಿದ್ದಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ. ಇದರಿಂದ ನೊಂದ ಅಮೃತ ಪೋಲೀಸರಿಗೆ ದೂರು ನೀಡಿದ್ದರಿಂದ ಮಾರುತಿರಾವ್ ಮತ್ತು ಕರೀಂನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಜಾತಿ ಅಮಲನ್ನು ನೆತ್ತಿಗೇರಿಸಿಕೊಂಡಿರುವ ದುರಹಾಂಕಾರಿ ಮಾರುತಿರಾವ್ ತನ್ನ ತಪ್ಪಿಗೆ ಮತ್ತು ಶಿಕ್ಷೆಗೆ ಪಾಠ ಕಲಿತಂತೆ ಕಾಣುತ್ತಿಲ್ಲ. ಅದಕ್ಕಾಗಿಯೇ ಅಮೃತ ಕುಟುಂಬವನ್ನು ಪದೇ ಪದೇ ಟಾರ್ಗೆಟ್ ಮಾಡುತ್ತಿರುವುದರಿಂದ ಆತನಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಅಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂಬ ಒತ್ತಾಯವನ್ನು ಪ್ರಜ್ಞಾವಂತರು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...