Homeಮುಖಪುಟಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

- Advertisement -
- Advertisement -

ಕಳೆದ ವರ್ಷ ನಲ್ಗೋಂಡ ಜಿಲ್ಲೆಯ ಮಿರ್ಯಾಲ ಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.

ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮತ್ತು ಆತನ ಗೂಂಡಾಗಳು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇಡೀ ದೇಶ ಈ ಹತ್ಯೆಯಿಂದ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಈ ಸನ್ನಿವೇಶವನ್ನು ಅಮೃತ ಸಹ ದಿಟ್ಟತನದಿಂದ ಎದುರಿಸಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಲ್ಲದೇ ಮೃತ ಗಂಡನ ಕುಟುಂಬದ ಜೊತೆಯೇ ಇದ್ದು ತಂದೆಯ ವಿರುದ್ಧ ಕಾನೂನು ಸಮರ ಸಾರಿದ್ದಳು. ಬಹಳಷ್ಟು ಜನರಿಗೆ ಅಂತರ್ಜಾತಿ ಮದುವೆಯಾಗಿ ಕುಟುಂಬವನ್ನು ಎದುರಿಸುವ ಬಗ್ಗೆ ಸ್ಫೂರ್ತಿಯಾಗಿ ಆಕೆ ನಿಂತಿದ್ದಾಳೆ. ಈಗ ಅಮೃತಾಳಿಗೆ ಮುದ್ದಾದ ಗಂಡುಮಗು ಜನಿಸಿದ್ದು ಆ ಮಗುವಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಆದರೆ ಪ್ರಣಯ್‌ ಹತ್ಯೆಯ ಪ್ರತ್ಯಕ್ಷ ಸಾಕ್ಷಿ ಅಮೃತಳೇ ಆಗಿದ್ದು, ಇತ್ತಿಚಿಗೆ ಕೋರ್ಟಿನಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳದಂತೆ ತಂದೆ ಮಾರುತಿರಾವ್ ಮತ್ತು ತನ್ನ ಬೆಂಬಲಿಗ ಕರೀಂ ಸೇರಿ ಅಮೃತಾಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಂದೆ ಮಾರುತಿರಾವ್ ನೊಂದಿಗೆ ಅಮೃತ

ಪ್ರಣಯ್‌ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದ ಮಾರುತಿರಾವ್ ಏಪ್ರಿಲ್‌ನಲ್ಲಿ ಬೇಲ್‌ ಮೇಲೆ ಹೊರಬಂದಿದ್ದಾನೆ. ಅದಾದ ಆರು ತಿಂಗಳಲ್ಲಿಯೇ ತನ್ನ ಸ್ನೇಹಿತ ಕಂದುಲ ವೆಂಕಟೇಶ್ವರರಾವ್‌ನನ್ನು ಅಮೃತ ವರ್ಷಿಣಿ ಜೊತೆ ಮಾತುಕತೆ ಕಳುಹಿಸಿದ್ದಾನೆ.

ವೆಂಕಟೇಶ್ವರಾವ್ ‘ನಿಮ್ಮ ತಂದೆ ಹೇಳಿದ ಹಾಗೆ ನೀನು ನಡೆದುಕೊಂಡರೆ ನಿಮ್ಮ ತಂದೆಯ ಆಸ್ತಿಯನ್ನೆಲ್ಲ ನಿನಗೆ ಬರೆದುಕೊಡಲಿದ್ದಾರೆ. ಆತನಿಗೆ ಇಷ್ಟವಾದ ವ್ಯಕ್ತಿಯನ್ನು ನೀನು ಮದುವೆ ಆದರೆ ಎಲ್ಲಾ ಆಸ್ತಿಯು ನಿನಗೆ ಸೇರುತ್ತದೆ ಎಂದು ಆಮಿಷ ಒಡ್ಡಿದ್ದಾನೆ. ಆದರೆ ತನ್ನ ಪತಿಯ ಹತ್ಯೆಯಿಂದ ಆಕ್ರೋಶಿತರಾಗಿರುವ ಅಮೃತಾ ಈ ಪ್ರಸ್ತಾಪವನ್ನು ತಿರಸ್ಕರಿಸಿ ವೆಂಕಟೇಶ್ವರಾವ್ ನನ್ನು ಮನೆಯಿಂದ ವಾಪಸ್ಸು ಕಳುಹಿಸಿದ್ದಾಳೆ.

ಮಗುವಿನೊಂದಿಗೆ ಅಮೃತ

ಇದರಿಂದ ಕುಪಿತಗೊಂಡಿರುವ ಆಕೆಯ ತಂದೆ ನಾನು ಹೇಳಿದಂತೆ ಕೇಳದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ, ನಿನಗೆ ತೊಂದರೆ ತಪ್ಪಿದ್ದಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ. ಇದರಿಂದ ನೊಂದ ಅಮೃತ ಪೋಲೀಸರಿಗೆ ದೂರು ನೀಡಿದ್ದರಿಂದ ಮಾರುತಿರಾವ್ ಮತ್ತು ಕರೀಂನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಜಾತಿ ಅಮಲನ್ನು ನೆತ್ತಿಗೇರಿಸಿಕೊಂಡಿರುವ ದುರಹಾಂಕಾರಿ ಮಾರುತಿರಾವ್ ತನ್ನ ತಪ್ಪಿಗೆ ಮತ್ತು ಶಿಕ್ಷೆಗೆ ಪಾಠ ಕಲಿತಂತೆ ಕಾಣುತ್ತಿಲ್ಲ. ಅದಕ್ಕಾಗಿಯೇ ಅಮೃತ ಕುಟುಂಬವನ್ನು ಪದೇ ಪದೇ ಟಾರ್ಗೆಟ್ ಮಾಡುತ್ತಿರುವುದರಿಂದ ಆತನಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಅಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂಬ ಒತ್ತಾಯವನ್ನು ಪ್ರಜ್ಞಾವಂತರು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...