Homeಮುಖಪುಟಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

- Advertisement -
- Advertisement -

ಕಳೆದ ವರ್ಷ ನಲ್ಗೋಂಡ ಜಿಲ್ಲೆಯ ಮಿರ್ಯಾಲ ಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.

ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮತ್ತು ಆತನ ಗೂಂಡಾಗಳು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇಡೀ ದೇಶ ಈ ಹತ್ಯೆಯಿಂದ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಈ ಸನ್ನಿವೇಶವನ್ನು ಅಮೃತ ಸಹ ದಿಟ್ಟತನದಿಂದ ಎದುರಿಸಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಲ್ಲದೇ ಮೃತ ಗಂಡನ ಕುಟುಂಬದ ಜೊತೆಯೇ ಇದ್ದು ತಂದೆಯ ವಿರುದ್ಧ ಕಾನೂನು ಸಮರ ಸಾರಿದ್ದಳು. ಬಹಳಷ್ಟು ಜನರಿಗೆ ಅಂತರ್ಜಾತಿ ಮದುವೆಯಾಗಿ ಕುಟುಂಬವನ್ನು ಎದುರಿಸುವ ಬಗ್ಗೆ ಸ್ಫೂರ್ತಿಯಾಗಿ ಆಕೆ ನಿಂತಿದ್ದಾಳೆ. ಈಗ ಅಮೃತಾಳಿಗೆ ಮುದ್ದಾದ ಗಂಡುಮಗು ಜನಿಸಿದ್ದು ಆ ಮಗುವಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಆದರೆ ಪ್ರಣಯ್‌ ಹತ್ಯೆಯ ಪ್ರತ್ಯಕ್ಷ ಸಾಕ್ಷಿ ಅಮೃತಳೇ ಆಗಿದ್ದು, ಇತ್ತಿಚಿಗೆ ಕೋರ್ಟಿನಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳದಂತೆ ತಂದೆ ಮಾರುತಿರಾವ್ ಮತ್ತು ತನ್ನ ಬೆಂಬಲಿಗ ಕರೀಂ ಸೇರಿ ಅಮೃತಾಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಂದೆ ಮಾರುತಿರಾವ್ ನೊಂದಿಗೆ ಅಮೃತ

ಪ್ರಣಯ್‌ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದ ಮಾರುತಿರಾವ್ ಏಪ್ರಿಲ್‌ನಲ್ಲಿ ಬೇಲ್‌ ಮೇಲೆ ಹೊರಬಂದಿದ್ದಾನೆ. ಅದಾದ ಆರು ತಿಂಗಳಲ್ಲಿಯೇ ತನ್ನ ಸ್ನೇಹಿತ ಕಂದುಲ ವೆಂಕಟೇಶ್ವರರಾವ್‌ನನ್ನು ಅಮೃತ ವರ್ಷಿಣಿ ಜೊತೆ ಮಾತುಕತೆ ಕಳುಹಿಸಿದ್ದಾನೆ.

ವೆಂಕಟೇಶ್ವರಾವ್ ‘ನಿಮ್ಮ ತಂದೆ ಹೇಳಿದ ಹಾಗೆ ನೀನು ನಡೆದುಕೊಂಡರೆ ನಿಮ್ಮ ತಂದೆಯ ಆಸ್ತಿಯನ್ನೆಲ್ಲ ನಿನಗೆ ಬರೆದುಕೊಡಲಿದ್ದಾರೆ. ಆತನಿಗೆ ಇಷ್ಟವಾದ ವ್ಯಕ್ತಿಯನ್ನು ನೀನು ಮದುವೆ ಆದರೆ ಎಲ್ಲಾ ಆಸ್ತಿಯು ನಿನಗೆ ಸೇರುತ್ತದೆ ಎಂದು ಆಮಿಷ ಒಡ್ಡಿದ್ದಾನೆ. ಆದರೆ ತನ್ನ ಪತಿಯ ಹತ್ಯೆಯಿಂದ ಆಕ್ರೋಶಿತರಾಗಿರುವ ಅಮೃತಾ ಈ ಪ್ರಸ್ತಾಪವನ್ನು ತಿರಸ್ಕರಿಸಿ ವೆಂಕಟೇಶ್ವರಾವ್ ನನ್ನು ಮನೆಯಿಂದ ವಾಪಸ್ಸು ಕಳುಹಿಸಿದ್ದಾಳೆ.

ಮಗುವಿನೊಂದಿಗೆ ಅಮೃತ

ಇದರಿಂದ ಕುಪಿತಗೊಂಡಿರುವ ಆಕೆಯ ತಂದೆ ನಾನು ಹೇಳಿದಂತೆ ಕೇಳದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ, ನಿನಗೆ ತೊಂದರೆ ತಪ್ಪಿದ್ದಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ. ಇದರಿಂದ ನೊಂದ ಅಮೃತ ಪೋಲೀಸರಿಗೆ ದೂರು ನೀಡಿದ್ದರಿಂದ ಮಾರುತಿರಾವ್ ಮತ್ತು ಕರೀಂನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಜಾತಿ ಅಮಲನ್ನು ನೆತ್ತಿಗೇರಿಸಿಕೊಂಡಿರುವ ದುರಹಾಂಕಾರಿ ಮಾರುತಿರಾವ್ ತನ್ನ ತಪ್ಪಿಗೆ ಮತ್ತು ಶಿಕ್ಷೆಗೆ ಪಾಠ ಕಲಿತಂತೆ ಕಾಣುತ್ತಿಲ್ಲ. ಅದಕ್ಕಾಗಿಯೇ ಅಮೃತ ಕುಟುಂಬವನ್ನು ಪದೇ ಪದೇ ಟಾರ್ಗೆಟ್ ಮಾಡುತ್ತಿರುವುದರಿಂದ ಆತನಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಅಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂಬ ಒತ್ತಾಯವನ್ನು ಪ್ರಜ್ಞಾವಂತರು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...