Homeಮುಖಪುಟಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

- Advertisement -
- Advertisement -

ಕಳೆದ ವರ್ಷ ನಲ್ಗೋಂಡ ಜಿಲ್ಲೆಯ ಮಿರ್ಯಾಲ ಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.

ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮತ್ತು ಆತನ ಗೂಂಡಾಗಳು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇಡೀ ದೇಶ ಈ ಹತ್ಯೆಯಿಂದ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಈ ಸನ್ನಿವೇಶವನ್ನು ಅಮೃತ ಸಹ ದಿಟ್ಟತನದಿಂದ ಎದುರಿಸಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಲ್ಲದೇ ಮೃತ ಗಂಡನ ಕುಟುಂಬದ ಜೊತೆಯೇ ಇದ್ದು ತಂದೆಯ ವಿರುದ್ಧ ಕಾನೂನು ಸಮರ ಸಾರಿದ್ದಳು. ಬಹಳಷ್ಟು ಜನರಿಗೆ ಅಂತರ್ಜಾತಿ ಮದುವೆಯಾಗಿ ಕುಟುಂಬವನ್ನು ಎದುರಿಸುವ ಬಗ್ಗೆ ಸ್ಫೂರ್ತಿಯಾಗಿ ಆಕೆ ನಿಂತಿದ್ದಾಳೆ. ಈಗ ಅಮೃತಾಳಿಗೆ ಮುದ್ದಾದ ಗಂಡುಮಗು ಜನಿಸಿದ್ದು ಆ ಮಗುವಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಆದರೆ ಪ್ರಣಯ್‌ ಹತ್ಯೆಯ ಪ್ರತ್ಯಕ್ಷ ಸಾಕ್ಷಿ ಅಮೃತಳೇ ಆಗಿದ್ದು, ಇತ್ತಿಚಿಗೆ ಕೋರ್ಟಿನಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳದಂತೆ ತಂದೆ ಮಾರುತಿರಾವ್ ಮತ್ತು ತನ್ನ ಬೆಂಬಲಿಗ ಕರೀಂ ಸೇರಿ ಅಮೃತಾಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಂದೆ ಮಾರುತಿರಾವ್ ನೊಂದಿಗೆ ಅಮೃತ

ಪ್ರಣಯ್‌ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದ ಮಾರುತಿರಾವ್ ಏಪ್ರಿಲ್‌ನಲ್ಲಿ ಬೇಲ್‌ ಮೇಲೆ ಹೊರಬಂದಿದ್ದಾನೆ. ಅದಾದ ಆರು ತಿಂಗಳಲ್ಲಿಯೇ ತನ್ನ ಸ್ನೇಹಿತ ಕಂದುಲ ವೆಂಕಟೇಶ್ವರರಾವ್‌ನನ್ನು ಅಮೃತ ವರ್ಷಿಣಿ ಜೊತೆ ಮಾತುಕತೆ ಕಳುಹಿಸಿದ್ದಾನೆ.

ವೆಂಕಟೇಶ್ವರಾವ್ ‘ನಿಮ್ಮ ತಂದೆ ಹೇಳಿದ ಹಾಗೆ ನೀನು ನಡೆದುಕೊಂಡರೆ ನಿಮ್ಮ ತಂದೆಯ ಆಸ್ತಿಯನ್ನೆಲ್ಲ ನಿನಗೆ ಬರೆದುಕೊಡಲಿದ್ದಾರೆ. ಆತನಿಗೆ ಇಷ್ಟವಾದ ವ್ಯಕ್ತಿಯನ್ನು ನೀನು ಮದುವೆ ಆದರೆ ಎಲ್ಲಾ ಆಸ್ತಿಯು ನಿನಗೆ ಸೇರುತ್ತದೆ ಎಂದು ಆಮಿಷ ಒಡ್ಡಿದ್ದಾನೆ. ಆದರೆ ತನ್ನ ಪತಿಯ ಹತ್ಯೆಯಿಂದ ಆಕ್ರೋಶಿತರಾಗಿರುವ ಅಮೃತಾ ಈ ಪ್ರಸ್ತಾಪವನ್ನು ತಿರಸ್ಕರಿಸಿ ವೆಂಕಟೇಶ್ವರಾವ್ ನನ್ನು ಮನೆಯಿಂದ ವಾಪಸ್ಸು ಕಳುಹಿಸಿದ್ದಾಳೆ.

ಮಗುವಿನೊಂದಿಗೆ ಅಮೃತ

ಇದರಿಂದ ಕುಪಿತಗೊಂಡಿರುವ ಆಕೆಯ ತಂದೆ ನಾನು ಹೇಳಿದಂತೆ ಕೇಳದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ, ನಿನಗೆ ತೊಂದರೆ ತಪ್ಪಿದ್ದಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ. ಇದರಿಂದ ನೊಂದ ಅಮೃತ ಪೋಲೀಸರಿಗೆ ದೂರು ನೀಡಿದ್ದರಿಂದ ಮಾರುತಿರಾವ್ ಮತ್ತು ಕರೀಂನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಜಾತಿ ಅಮಲನ್ನು ನೆತ್ತಿಗೇರಿಸಿಕೊಂಡಿರುವ ದುರಹಾಂಕಾರಿ ಮಾರುತಿರಾವ್ ತನ್ನ ತಪ್ಪಿಗೆ ಮತ್ತು ಶಿಕ್ಷೆಗೆ ಪಾಠ ಕಲಿತಂತೆ ಕಾಣುತ್ತಿಲ್ಲ. ಅದಕ್ಕಾಗಿಯೇ ಅಮೃತ ಕುಟುಂಬವನ್ನು ಪದೇ ಪದೇ ಟಾರ್ಗೆಟ್ ಮಾಡುತ್ತಿರುವುದರಿಂದ ಆತನಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಅಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂಬ ಒತ್ತಾಯವನ್ನು ಪ್ರಜ್ಞಾವಂತರು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...