Homeಮುಖಪುಟಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

- Advertisement -
- Advertisement -

ಕಳೆದ ವರ್ಷ ನಲ್ಗೋಂಡ ಜಿಲ್ಲೆಯ ಮಿರ್ಯಾಲ ಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.

ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮತ್ತು ಆತನ ಗೂಂಡಾಗಳು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇಡೀ ದೇಶ ಈ ಹತ್ಯೆಯಿಂದ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಈ ಸನ್ನಿವೇಶವನ್ನು ಅಮೃತ ಸಹ ದಿಟ್ಟತನದಿಂದ ಎದುರಿಸಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಲ್ಲದೇ ಮೃತ ಗಂಡನ ಕುಟುಂಬದ ಜೊತೆಯೇ ಇದ್ದು ತಂದೆಯ ವಿರುದ್ಧ ಕಾನೂನು ಸಮರ ಸಾರಿದ್ದಳು. ಬಹಳಷ್ಟು ಜನರಿಗೆ ಅಂತರ್ಜಾತಿ ಮದುವೆಯಾಗಿ ಕುಟುಂಬವನ್ನು ಎದುರಿಸುವ ಬಗ್ಗೆ ಸ್ಫೂರ್ತಿಯಾಗಿ ಆಕೆ ನಿಂತಿದ್ದಾಳೆ. ಈಗ ಅಮೃತಾಳಿಗೆ ಮುದ್ದಾದ ಗಂಡುಮಗು ಜನಿಸಿದ್ದು ಆ ಮಗುವಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಆದರೆ ಪ್ರಣಯ್‌ ಹತ್ಯೆಯ ಪ್ರತ್ಯಕ್ಷ ಸಾಕ್ಷಿ ಅಮೃತಳೇ ಆಗಿದ್ದು, ಇತ್ತಿಚಿಗೆ ಕೋರ್ಟಿನಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳದಂತೆ ತಂದೆ ಮಾರುತಿರಾವ್ ಮತ್ತು ತನ್ನ ಬೆಂಬಲಿಗ ಕರೀಂ ಸೇರಿ ಅಮೃತಾಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಂದೆ ಮಾರುತಿರಾವ್ ನೊಂದಿಗೆ ಅಮೃತ

ಪ್ರಣಯ್‌ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದ ಮಾರುತಿರಾವ್ ಏಪ್ರಿಲ್‌ನಲ್ಲಿ ಬೇಲ್‌ ಮೇಲೆ ಹೊರಬಂದಿದ್ದಾನೆ. ಅದಾದ ಆರು ತಿಂಗಳಲ್ಲಿಯೇ ತನ್ನ ಸ್ನೇಹಿತ ಕಂದುಲ ವೆಂಕಟೇಶ್ವರರಾವ್‌ನನ್ನು ಅಮೃತ ವರ್ಷಿಣಿ ಜೊತೆ ಮಾತುಕತೆ ಕಳುಹಿಸಿದ್ದಾನೆ.

ವೆಂಕಟೇಶ್ವರಾವ್ ‘ನಿಮ್ಮ ತಂದೆ ಹೇಳಿದ ಹಾಗೆ ನೀನು ನಡೆದುಕೊಂಡರೆ ನಿಮ್ಮ ತಂದೆಯ ಆಸ್ತಿಯನ್ನೆಲ್ಲ ನಿನಗೆ ಬರೆದುಕೊಡಲಿದ್ದಾರೆ. ಆತನಿಗೆ ಇಷ್ಟವಾದ ವ್ಯಕ್ತಿಯನ್ನು ನೀನು ಮದುವೆ ಆದರೆ ಎಲ್ಲಾ ಆಸ್ತಿಯು ನಿನಗೆ ಸೇರುತ್ತದೆ ಎಂದು ಆಮಿಷ ಒಡ್ಡಿದ್ದಾನೆ. ಆದರೆ ತನ್ನ ಪತಿಯ ಹತ್ಯೆಯಿಂದ ಆಕ್ರೋಶಿತರಾಗಿರುವ ಅಮೃತಾ ಈ ಪ್ರಸ್ತಾಪವನ್ನು ತಿರಸ್ಕರಿಸಿ ವೆಂಕಟೇಶ್ವರಾವ್ ನನ್ನು ಮನೆಯಿಂದ ವಾಪಸ್ಸು ಕಳುಹಿಸಿದ್ದಾಳೆ.

ಮಗುವಿನೊಂದಿಗೆ ಅಮೃತ

ಇದರಿಂದ ಕುಪಿತಗೊಂಡಿರುವ ಆಕೆಯ ತಂದೆ ನಾನು ಹೇಳಿದಂತೆ ಕೇಳದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ, ನಿನಗೆ ತೊಂದರೆ ತಪ್ಪಿದ್ದಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ. ಇದರಿಂದ ನೊಂದ ಅಮೃತ ಪೋಲೀಸರಿಗೆ ದೂರು ನೀಡಿದ್ದರಿಂದ ಮಾರುತಿರಾವ್ ಮತ್ತು ಕರೀಂನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಜಾತಿ ಅಮಲನ್ನು ನೆತ್ತಿಗೇರಿಸಿಕೊಂಡಿರುವ ದುರಹಾಂಕಾರಿ ಮಾರುತಿರಾವ್ ತನ್ನ ತಪ್ಪಿಗೆ ಮತ್ತು ಶಿಕ್ಷೆಗೆ ಪಾಠ ಕಲಿತಂತೆ ಕಾಣುತ್ತಿಲ್ಲ. ಅದಕ್ಕಾಗಿಯೇ ಅಮೃತ ಕುಟುಂಬವನ್ನು ಪದೇ ಪದೇ ಟಾರ್ಗೆಟ್ ಮಾಡುತ್ತಿರುವುದರಿಂದ ಆತನಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಅಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂಬ ಒತ್ತಾಯವನ್ನು ಪ್ರಜ್ಞಾವಂತರು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...