Homeಮುಖಪುಟಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಂತರ್ಜಾತಿ ವಿವಾಹ: ಪ್ರಣಯ್‌ ಹತ್ಯೆ, ಒಂಟಿಯಾದ ಅಮೃತ, ಆರೋಪಿಯಾದ ಆಕೆಯ ತಂದೆ ಆತ್ಮಹತ್ಯೆ, ದೇಶದ ಜಡ್ಡಗಟ್ಟಿದ ಜಾಸ್ತಿ ವ್ಯವಸ್ಥೆ... ಒಂದಕ್ಕೊಂದು ಸೇರಿಕೊಂಡ ಗೋಜಲುಗಳು

- Advertisement -
- Advertisement -

ಅಮೃತಾ- ಪ್ರಣಯ್‌ ಅಂತರ್ಜಾತಿ ವಿವಾಹದ ಕಾರಣಕ್ಕೆ ತೆಲಂಗಾಣವಲ್ಲದೇ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪ್ರಣಯ್ ಹತ್ಯೆಯ ಮುಖ್ಯ ಆರೋಪಿಯಾಗಿದ್ದ ಅಮೃತಾಳ ತಂದೆ ಮಾರುತಿರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಷ್ಟಕ್ಕೆ ಕೆಲವರು ನ್ಯಾಯ ಸಿಕ್ಕಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ದೇಶದ ಜಾತಿ ವ್ಯವಸ್ಥೆ ಅಷ್ಟು ಸುಲಭವಲ್ಲ ಎಂಬುದು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದೆ.

ಕಳೆದ ವರ್ಷ ತೆಲಂಗಾಣದ ನಲ್ಗೋಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.


ಇದನ್ನೂ ಓದಿ : ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?


ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮಾರುತಿರಾವ್ ಮತ್ತು ಆತನ ಗೂಂಡಾಗಳು 2018 ಸೆಪ್ಟೆಂಬರ್ 14ರಂದು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಇಡೀ ದೇಶ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಆ ಸಂದರ್ಭದಲ್ಲಿ ನೊಂದು ಬೆಂದು ಒಂಟಿಯಾದ ಅಮೃತಾ ಏನು ಮಾಡಬೇಕು? ತುಂಬು ಗರ್ಭಿಣಿಯಾದ ಅವಳು ತನ್ನ ಗಂಡನನ್ನು ತನ್ನ ಕಣ್ಣಾರೆ ಕೊಂದ ಅಪ್ಪನ ಮನೆಗೆ ಹೋಗಬೇಕೆ? ಇಲ್ಲ ತನ್ನ ಗಂಡನಿಲ್ಲದಿದ್ದರೂ ಗಂಡನ ಮನೆಯಲ್ಲಿ ಇರಬೇಕೆ ಎಂಬುದರ ಕುರಿತು ಗೊಂದಲಗೊಂಡಳು. ಆದರೆ ಕೊನೆಗೆ ತನ್ನ ಅಪ್ಪನ ವಿರುದ್ಧ ದೂರು ನೀಡಿ ತನ್ನ ಗಂಡನ ಮನೆಯಲ್ಲಿಯೇ ಉಳಿದುಕೊಂಡಳು. ಪ್ರಣಯ್‌ನ ತಂದೆ ತಾಯಿಯರು ಸಹ ಮಗ ಬಲಿಯಾದರೂ ಸೊಸೆ ಅಮೃತಾಳನ್ನು ಮನೆ ಮಗಳಂತೆ ನೋಡಿಕೊಳ್ಳಲು ಆರಂಭಿಸಿದರು. ಅಮೃತಾಗೆ ಮುದ್ದಾದ ಗಂಡು ಮಗು ಹುಟ್ಟಿದೆ. ಆ ಮಗುವಿಗೆ ನಿಹಾನ್‌ ಎಂದು ಹೆಸರಿಡಲಾಗಿದೆ.

ಈಗ ಒಂದೂವರೆ ವರ್ಷದ ಬಳಿಕ ಆ ಪ್ರಕರಣದ ಪ್ರಮುಖ ಆರೋಪಿ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಳ್ಳುವಾಗ ಬರೆದ ಪತ್ರದಲ್ಲಿ “ಗಿರಿಜಾ (ಹೆಂಡತಿ) ಕ್ಷಮಿಸು, ಅಮೃತ(ಮಗಳು) ಅಮ್ಮನ ಹತ್ತಿರ ಬಾ’ ಎಂದು ಮನವಿ ಮಾಡಿದ್ದಾನೆ.

ಈಗ ಬಹಳಷ್ಟು ಜಾತಿವಾದಿಗಳು ಅಮೃತಾ ಮೇಲೆ ಮುಗಿಬಿದ್ದಿದ್ದಾರೆ. ನಿನ್ನಿಂದಾಗಿ ನಮ್ಮ ಸಮದಾಯದ ಮಾನ ಮರ್ಯಾದೆ ಹಾಳಾಗಿದ್ದಲ್ಲದೇ ನಿನ್ನ ಅಪ್ಪನ ಸಾವಿಗೂ ನೀನೇ ಕಾರಣಳಾಗಿದ್ದೀಯ. ನಿನ್ನ ತಾಯಿ ಒಂಟಿಯಾಗಲು ನೀನೇ ಕಾರಣಳಾಗಿದ್ದೀಯ.. ಈಗಲಾದರೂ ನಿನ್ನ ತವರು ಮನೆಗೆ ಬಂದು ನಿನ್ನ ಒಬ್ಬಂಟಿ ತಾಯಿಯನ್ನು ನೋಡಿಕೊ ಎಂದು ಉಪದೇಶಗಳನ್ನು ನೀಡುತ್ತಿದ್ದಾರೆ.

ನಿನ್ನ ತಂದೆ ಪಶ್ಚಾತಾಪಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ನಿನಗೆ ಪಶ್ಚಾತಾಪವಿಲ್ಲ ನೋಡು ಎಂದು ಹಂಗಿಸುತ್ತಿದ್ದಾರೆ. ಒಟ್ಟಿನಲ್ಲಿ ತನ್ನ ಮಗಳನ್ನೇ ಕೊಂದ ಕೊಲೆಗಡುಕ, ಜಾತಿ ಕ್ರಿಮಿ ಮಾರುತಿರಾವ್‌ ಮೇಲೆ ಅನುಕಂಪ ತೋರಿಸುತ್ತಾ, ಸಂತ್ರಸ್ತೆಯಾದ ಅಮೃತಾಳನ್ನೇ ವಿಲನ್‌ ಮಾಡಲು ನೋಡುತ್ತಿದ್ದಾರೆ.

ವಾಸ್ತವವೇನು

ಅಮೃತಾ ದೂರು ನೀಡಿದ ನಂತರ ಮಾರುತಿರಾವ್ ಮತ್ತು ಆತನ ಸಹಚರರ ಮೇಲೆ ಬಲವಾದ ಕೇಸುಗಳು ಬಿದ್ದಿದ್ದು ಕೋರ್ಟ್‍ಗೆ ಅಲೆಯುತ್ತಿದ್ದ. ಇತ್ತಿಚೆಗೆ ಅಮೃತಾಳನ್ನು ತನ್ನ ಮನೆಗೆ ಬಂದರೆ ಆಸ್ತಿಯೆಲ್ಲ ಬರೆದುಕೊಡುವುದಾಗಿ ಹೇಳಿ ಬೆದರಿಕೆ ಹಾಕಿಸಿದರು ಅಮೃತಾ ಜಗ್ಗದೇ ಮತ್ತೆ ಈ ಬೆದರಿಕೆಯ ವಿಚಾರದ ಕುರಿತು ಪೋಲೀಸರಿಗೆ ದೂರು ನೀಡಿದ್ದಳು. ಮಾರುತಿರಾವ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು ಸಾಕಷ್ಟು ಆಸ್ತಿ ಮಾಡಿದ್ದಾನೆ. ಈ ಕುರಿತು ಆತ ಮತ್ತು ಆತನ ಸಹೋದರ ಶ್ರವಣ್ ನಡುವೆ ಜಗಳ ಸಹ ನಡೆಯುತ್ತಿತ್ತು.

ಮಾರುತಿರಾವ್‌ ಸಹೋದರ ಶ್ರವಣ್‌ ಕೂಡ ಕೊಲೆ ಆರೋಪಿಯಾಗಿದ್ದ. ಹಾಗಾಗಿ ಆತ ಪದೇ ಪದೇ ಕೊಲೆ ಕೇಸಿನಲ್ಲಿ ನಾನು ಅಲೆಯುತ್ತಿದ್ದೇನೆ. ನಿನಗಿದ್ದ ಒಬ್ಬಳೇ ಮಗಳು ಸಹ ನಿನ್ನ ಜೊತೆಗಿಲ್ಲ ಮಾತ್ರವಲ್ಲದೇ ನಿನ್ನ ವಿರುದ್ಧವೇ ದೂರು ನೀಡುತ್ತಿದ್ದಾಳೆ. ಹಾಗಾಗಿ ಆಕೆಯನ್ನು ಮುಗಿಸಿಬಿಡು, ನಿನ್ನ ಆಸ್ತಿಯನ್ನೆಲ್ಲ ನನ್ನ ಹೆಸರಿಗೆ ಬರೆದುಕೊಂಡು ಎಂದು ದುಂಬಾಲು ಬಿದ್ದಿದ್ದ ಎಂಬ ಸತ್ಯಗಳು ಒಂದೊಂದೇ ಹೊರಬರುತ್ತಿವೆ.

ಇದೆಲ್ಲವೂ ಅಮೃತಾಳ ಗಮನಕ್ಕೆ ಬಂದಿತ್ತು. ಹಾಗಾಗಿಯೇ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅಕೆ “ನನ್ನ ತಂದೆ ಮಾರುತಿರಾವ್ ಹೆದರಿಕೆಯ ವ್ಯಕ್ತಿಯಲ್ಲ. ಪಶ್ಚಾತ್ತಾಪದಿಂದ ಆತ್ಮಹತ್ಯೆ ಮಾಡಿಕೊಳ್ಳುವವರಾಗಿದ್ದರೆ ಈ ಹಿಂದೆಯೇ ಮಾಡಿಕೊಳ್ಳುತ್ತಿದ್ದರು. ನಮ್ಮ ಚಿಕ್ಕಪ್ಪ ಶ್ರವಣ್ ಜೊತೆ ನಮ್ಮ ತಂದೆಗೆ ಹಲವಾರು ಭಾರಿ ಆಸ್ತಿ ಜಗಳ ಆಗಿದೆ ಎಂದು ಕೇಳಿದ್ದೆ, ಈ ಆತ್ಮಹತ್ಯೆಗೆ ಇದೇ ಕಾರಣವು ಇರಬಹುದು” ಎಂಬ ಸಂದೇಹ ವ್ಯಕ್ತಪಡಿಸಿದ್ದಾಳೆ.

ಒಬ್ಬ ವ್ಯಕ್ತಿಗೆ ತನ್ನನ್ನು ತಾನು ಕೊಂದುಕೊಳ್ಳುವ ಮತ್ತು ಇನ್ನೊಬ್ಬರನ್ನು ಕೊಲ್ಲವ ಯಾವುದೇ ಹಕ್ಕು ಇಲ್ಲ. ನ್ಯಾಯಾಲಯದ ಮೂಲಕ ನಮ್ಮ ತಂದೆಗೆ ಯಾವುದೇ ರೀತಿಯ ಶಿಕ್ಷೆ ಆಗಿದ್ದರೂ ಸಹ ನಾನು ಸ್ವಾಗತಿಸುತ್ತಿದ್ದೆ. ಆದರೆ ಈ ಆತ್ಮಹತ್ಯೆ ಮಾಡಿಕೊಂಡಿರುವ ವೀಚಾರ ನೋವನ್ನು ತಂದಿದೆ. ಗಂಡ ತೀರಿಕೊಂಡರೆ ಆ ಹೆಂಡತಿಯ ಸ್ಥಿತಿ ಹೇಗಿರುತ್ತದೆ ಎಂದು ನನಗೆ ಒಂದೂವರೆ ವರ್ಷದಿಂದ ಅನುಭವವಾಗಿದೆ. ಹಾಗಾಗಿಯೇ ನಮ್ಮ ತಾಯಿಯನ್ನು ಮಾತಾಡಿಸಲು ಹೋಗಿದ್ದೆ. ಆದರೆ ಅಲ್ಲಿನ ನಮ್ಮ ಕುಟುಂಬಸ್ಥರು ನನಗೆ ಅನುಮತಿ ನೀಡಲಿಲ್ಲ. ಮಗನನ್ನು ಕಳೆದುಕೊಂಡ ನನ್ನ ಅತ್ತೆ-ಮಾವನನ್ನು ನಾನು ಬಿಟ್ಟುಹೋಗಲು ಸಾಧ್ಯವಿಲ್ಲ. ಆದರೆ ನನ್ನ ತಾಯಿಯು ನನ್ನ ಜೊತೆ ಬಂದರೆ ನಾನೇ ನೋಡಿಕೊಳ್ಳುತ್ತೇನೆ. ನನಗೆ ಮಾರುತಿರಾವ್‍ನ ಯಾವ ಆಸ್ತಿಯ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾಳೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು


ಆ ಮೂಲಕ ಜಾತಿಗಿಂತ ಮಾನವೀಯತೆ ಮತ್ತು ಮನುಷ್ಯ ಸಂಬಂಧಗಳು ಮುಖ್ಯ ಎಂದು ಸಾರಿದ್ದಾಳೆ. ಆಕೆ ಪ್ರಬುದ್ಧವಾಗಿ ನಡೆದುಕೊಂಡಿದ್ದಾಳೆ. ಆದರೆ ಆಕೆಯ ಕುಟುಂಬ ಮಾತ್ರ ಇನ್ನು ಜಾತಿಗ್ರಸ್ಥ ಮನಸ್ಥಿತಿಯಿಂದ ಹೊರಬಂದಿಲ್ಲ. ಇದು ಈ ದೇಶದ ದುಸ್ಥಿತಿಯಾಗಿದೆ. ಹಾಗಾಗಿಯೇ ಜಸ್ಟೀಸ್ ಫಾರ್‌ ಪ್ರಣಯ್‌ ಎಂಬ ಅಭಿಯಾನದ ಮೂಲಕ ಅಮೃತಾ ತನ್ನ ಹೋರಾಟವನ್ನು ಮುಂದುವರೆಸಿದ್ದಾಳೆ. ಸಮಾಜ ಈ ಸಂದರ್ಭದಲ್ಲಿ ಆಕೆಯ ಪರ ನಿಲ್ಲಬೇಕೆ ಹೊರತು ಜಾತಿವಾದಿ ಆಕೆಯ ತಂದೆಯ ಪರವಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...