Homeಮುಖಪುಟಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಂತರ್ಜಾತಿ ವಿವಾಹ: ಪ್ರಣಯ್‌ ಹತ್ಯೆ, ಒಂಟಿಯಾದ ಅಮೃತ, ಆರೋಪಿಯಾದ ಆಕೆಯ ತಂದೆ ಆತ್ಮಹತ್ಯೆ, ದೇಶದ ಜಡ್ಡಗಟ್ಟಿದ ಜಾಸ್ತಿ ವ್ಯವಸ್ಥೆ... ಒಂದಕ್ಕೊಂದು ಸೇರಿಕೊಂಡ ಗೋಜಲುಗಳು

- Advertisement -
- Advertisement -

ಅಮೃತಾ- ಪ್ರಣಯ್‌ ಅಂತರ್ಜಾತಿ ವಿವಾಹದ ಕಾರಣಕ್ಕೆ ತೆಲಂಗಾಣವಲ್ಲದೇ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪ್ರಣಯ್ ಹತ್ಯೆಯ ಮುಖ್ಯ ಆರೋಪಿಯಾಗಿದ್ದ ಅಮೃತಾಳ ತಂದೆ ಮಾರುತಿರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಷ್ಟಕ್ಕೆ ಕೆಲವರು ನ್ಯಾಯ ಸಿಕ್ಕಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ದೇಶದ ಜಾತಿ ವ್ಯವಸ್ಥೆ ಅಷ್ಟು ಸುಲಭವಲ್ಲ ಎಂಬುದು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದೆ.

ಕಳೆದ ವರ್ಷ ತೆಲಂಗಾಣದ ನಲ್ಗೋಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.


ಇದನ್ನೂ ಓದಿ : ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?


ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮಾರುತಿರಾವ್ ಮತ್ತು ಆತನ ಗೂಂಡಾಗಳು 2018 ಸೆಪ್ಟೆಂಬರ್ 14ರಂದು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಇಡೀ ದೇಶ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಆ ಸಂದರ್ಭದಲ್ಲಿ ನೊಂದು ಬೆಂದು ಒಂಟಿಯಾದ ಅಮೃತಾ ಏನು ಮಾಡಬೇಕು? ತುಂಬು ಗರ್ಭಿಣಿಯಾದ ಅವಳು ತನ್ನ ಗಂಡನನ್ನು ತನ್ನ ಕಣ್ಣಾರೆ ಕೊಂದ ಅಪ್ಪನ ಮನೆಗೆ ಹೋಗಬೇಕೆ? ಇಲ್ಲ ತನ್ನ ಗಂಡನಿಲ್ಲದಿದ್ದರೂ ಗಂಡನ ಮನೆಯಲ್ಲಿ ಇರಬೇಕೆ ಎಂಬುದರ ಕುರಿತು ಗೊಂದಲಗೊಂಡಳು. ಆದರೆ ಕೊನೆಗೆ ತನ್ನ ಅಪ್ಪನ ವಿರುದ್ಧ ದೂರು ನೀಡಿ ತನ್ನ ಗಂಡನ ಮನೆಯಲ್ಲಿಯೇ ಉಳಿದುಕೊಂಡಳು. ಪ್ರಣಯ್‌ನ ತಂದೆ ತಾಯಿಯರು ಸಹ ಮಗ ಬಲಿಯಾದರೂ ಸೊಸೆ ಅಮೃತಾಳನ್ನು ಮನೆ ಮಗಳಂತೆ ನೋಡಿಕೊಳ್ಳಲು ಆರಂಭಿಸಿದರು. ಅಮೃತಾಗೆ ಮುದ್ದಾದ ಗಂಡು ಮಗು ಹುಟ್ಟಿದೆ. ಆ ಮಗುವಿಗೆ ನಿಹಾನ್‌ ಎಂದು ಹೆಸರಿಡಲಾಗಿದೆ.

ಈಗ ಒಂದೂವರೆ ವರ್ಷದ ಬಳಿಕ ಆ ಪ್ರಕರಣದ ಪ್ರಮುಖ ಆರೋಪಿ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಳ್ಳುವಾಗ ಬರೆದ ಪತ್ರದಲ್ಲಿ “ಗಿರಿಜಾ (ಹೆಂಡತಿ) ಕ್ಷಮಿಸು, ಅಮೃತ(ಮಗಳು) ಅಮ್ಮನ ಹತ್ತಿರ ಬಾ’ ಎಂದು ಮನವಿ ಮಾಡಿದ್ದಾನೆ.

ಈಗ ಬಹಳಷ್ಟು ಜಾತಿವಾದಿಗಳು ಅಮೃತಾ ಮೇಲೆ ಮುಗಿಬಿದ್ದಿದ್ದಾರೆ. ನಿನ್ನಿಂದಾಗಿ ನಮ್ಮ ಸಮದಾಯದ ಮಾನ ಮರ್ಯಾದೆ ಹಾಳಾಗಿದ್ದಲ್ಲದೇ ನಿನ್ನ ಅಪ್ಪನ ಸಾವಿಗೂ ನೀನೇ ಕಾರಣಳಾಗಿದ್ದೀಯ. ನಿನ್ನ ತಾಯಿ ಒಂಟಿಯಾಗಲು ನೀನೇ ಕಾರಣಳಾಗಿದ್ದೀಯ.. ಈಗಲಾದರೂ ನಿನ್ನ ತವರು ಮನೆಗೆ ಬಂದು ನಿನ್ನ ಒಬ್ಬಂಟಿ ತಾಯಿಯನ್ನು ನೋಡಿಕೊ ಎಂದು ಉಪದೇಶಗಳನ್ನು ನೀಡುತ್ತಿದ್ದಾರೆ.

ನಿನ್ನ ತಂದೆ ಪಶ್ಚಾತಾಪಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ನಿನಗೆ ಪಶ್ಚಾತಾಪವಿಲ್ಲ ನೋಡು ಎಂದು ಹಂಗಿಸುತ್ತಿದ್ದಾರೆ. ಒಟ್ಟಿನಲ್ಲಿ ತನ್ನ ಮಗಳನ್ನೇ ಕೊಂದ ಕೊಲೆಗಡುಕ, ಜಾತಿ ಕ್ರಿಮಿ ಮಾರುತಿರಾವ್‌ ಮೇಲೆ ಅನುಕಂಪ ತೋರಿಸುತ್ತಾ, ಸಂತ್ರಸ್ತೆಯಾದ ಅಮೃತಾಳನ್ನೇ ವಿಲನ್‌ ಮಾಡಲು ನೋಡುತ್ತಿದ್ದಾರೆ.

ವಾಸ್ತವವೇನು

ಅಮೃತಾ ದೂರು ನೀಡಿದ ನಂತರ ಮಾರುತಿರಾವ್ ಮತ್ತು ಆತನ ಸಹಚರರ ಮೇಲೆ ಬಲವಾದ ಕೇಸುಗಳು ಬಿದ್ದಿದ್ದು ಕೋರ್ಟ್‍ಗೆ ಅಲೆಯುತ್ತಿದ್ದ. ಇತ್ತಿಚೆಗೆ ಅಮೃತಾಳನ್ನು ತನ್ನ ಮನೆಗೆ ಬಂದರೆ ಆಸ್ತಿಯೆಲ್ಲ ಬರೆದುಕೊಡುವುದಾಗಿ ಹೇಳಿ ಬೆದರಿಕೆ ಹಾಕಿಸಿದರು ಅಮೃತಾ ಜಗ್ಗದೇ ಮತ್ತೆ ಈ ಬೆದರಿಕೆಯ ವಿಚಾರದ ಕುರಿತು ಪೋಲೀಸರಿಗೆ ದೂರು ನೀಡಿದ್ದಳು. ಮಾರುತಿರಾವ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು ಸಾಕಷ್ಟು ಆಸ್ತಿ ಮಾಡಿದ್ದಾನೆ. ಈ ಕುರಿತು ಆತ ಮತ್ತು ಆತನ ಸಹೋದರ ಶ್ರವಣ್ ನಡುವೆ ಜಗಳ ಸಹ ನಡೆಯುತ್ತಿತ್ತು.

ಮಾರುತಿರಾವ್‌ ಸಹೋದರ ಶ್ರವಣ್‌ ಕೂಡ ಕೊಲೆ ಆರೋಪಿಯಾಗಿದ್ದ. ಹಾಗಾಗಿ ಆತ ಪದೇ ಪದೇ ಕೊಲೆ ಕೇಸಿನಲ್ಲಿ ನಾನು ಅಲೆಯುತ್ತಿದ್ದೇನೆ. ನಿನಗಿದ್ದ ಒಬ್ಬಳೇ ಮಗಳು ಸಹ ನಿನ್ನ ಜೊತೆಗಿಲ್ಲ ಮಾತ್ರವಲ್ಲದೇ ನಿನ್ನ ವಿರುದ್ಧವೇ ದೂರು ನೀಡುತ್ತಿದ್ದಾಳೆ. ಹಾಗಾಗಿ ಆಕೆಯನ್ನು ಮುಗಿಸಿಬಿಡು, ನಿನ್ನ ಆಸ್ತಿಯನ್ನೆಲ್ಲ ನನ್ನ ಹೆಸರಿಗೆ ಬರೆದುಕೊಂಡು ಎಂದು ದುಂಬಾಲು ಬಿದ್ದಿದ್ದ ಎಂಬ ಸತ್ಯಗಳು ಒಂದೊಂದೇ ಹೊರಬರುತ್ತಿವೆ.

ಇದೆಲ್ಲವೂ ಅಮೃತಾಳ ಗಮನಕ್ಕೆ ಬಂದಿತ್ತು. ಹಾಗಾಗಿಯೇ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅಕೆ “ನನ್ನ ತಂದೆ ಮಾರುತಿರಾವ್ ಹೆದರಿಕೆಯ ವ್ಯಕ್ತಿಯಲ್ಲ. ಪಶ್ಚಾತ್ತಾಪದಿಂದ ಆತ್ಮಹತ್ಯೆ ಮಾಡಿಕೊಳ್ಳುವವರಾಗಿದ್ದರೆ ಈ ಹಿಂದೆಯೇ ಮಾಡಿಕೊಳ್ಳುತ್ತಿದ್ದರು. ನಮ್ಮ ಚಿಕ್ಕಪ್ಪ ಶ್ರವಣ್ ಜೊತೆ ನಮ್ಮ ತಂದೆಗೆ ಹಲವಾರು ಭಾರಿ ಆಸ್ತಿ ಜಗಳ ಆಗಿದೆ ಎಂದು ಕೇಳಿದ್ದೆ, ಈ ಆತ್ಮಹತ್ಯೆಗೆ ಇದೇ ಕಾರಣವು ಇರಬಹುದು” ಎಂಬ ಸಂದೇಹ ವ್ಯಕ್ತಪಡಿಸಿದ್ದಾಳೆ.

ಒಬ್ಬ ವ್ಯಕ್ತಿಗೆ ತನ್ನನ್ನು ತಾನು ಕೊಂದುಕೊಳ್ಳುವ ಮತ್ತು ಇನ್ನೊಬ್ಬರನ್ನು ಕೊಲ್ಲವ ಯಾವುದೇ ಹಕ್ಕು ಇಲ್ಲ. ನ್ಯಾಯಾಲಯದ ಮೂಲಕ ನಮ್ಮ ತಂದೆಗೆ ಯಾವುದೇ ರೀತಿಯ ಶಿಕ್ಷೆ ಆಗಿದ್ದರೂ ಸಹ ನಾನು ಸ್ವಾಗತಿಸುತ್ತಿದ್ದೆ. ಆದರೆ ಈ ಆತ್ಮಹತ್ಯೆ ಮಾಡಿಕೊಂಡಿರುವ ವೀಚಾರ ನೋವನ್ನು ತಂದಿದೆ. ಗಂಡ ತೀರಿಕೊಂಡರೆ ಆ ಹೆಂಡತಿಯ ಸ್ಥಿತಿ ಹೇಗಿರುತ್ತದೆ ಎಂದು ನನಗೆ ಒಂದೂವರೆ ವರ್ಷದಿಂದ ಅನುಭವವಾಗಿದೆ. ಹಾಗಾಗಿಯೇ ನಮ್ಮ ತಾಯಿಯನ್ನು ಮಾತಾಡಿಸಲು ಹೋಗಿದ್ದೆ. ಆದರೆ ಅಲ್ಲಿನ ನಮ್ಮ ಕುಟುಂಬಸ್ಥರು ನನಗೆ ಅನುಮತಿ ನೀಡಲಿಲ್ಲ. ಮಗನನ್ನು ಕಳೆದುಕೊಂಡ ನನ್ನ ಅತ್ತೆ-ಮಾವನನ್ನು ನಾನು ಬಿಟ್ಟುಹೋಗಲು ಸಾಧ್ಯವಿಲ್ಲ. ಆದರೆ ನನ್ನ ತಾಯಿಯು ನನ್ನ ಜೊತೆ ಬಂದರೆ ನಾನೇ ನೋಡಿಕೊಳ್ಳುತ್ತೇನೆ. ನನಗೆ ಮಾರುತಿರಾವ್‍ನ ಯಾವ ಆಸ್ತಿಯ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾಳೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು


ಆ ಮೂಲಕ ಜಾತಿಗಿಂತ ಮಾನವೀಯತೆ ಮತ್ತು ಮನುಷ್ಯ ಸಂಬಂಧಗಳು ಮುಖ್ಯ ಎಂದು ಸಾರಿದ್ದಾಳೆ. ಆಕೆ ಪ್ರಬುದ್ಧವಾಗಿ ನಡೆದುಕೊಂಡಿದ್ದಾಳೆ. ಆದರೆ ಆಕೆಯ ಕುಟುಂಬ ಮಾತ್ರ ಇನ್ನು ಜಾತಿಗ್ರಸ್ಥ ಮನಸ್ಥಿತಿಯಿಂದ ಹೊರಬಂದಿಲ್ಲ. ಇದು ಈ ದೇಶದ ದುಸ್ಥಿತಿಯಾಗಿದೆ. ಹಾಗಾಗಿಯೇ ಜಸ್ಟೀಸ್ ಫಾರ್‌ ಪ್ರಣಯ್‌ ಎಂಬ ಅಭಿಯಾನದ ಮೂಲಕ ಅಮೃತಾ ತನ್ನ ಹೋರಾಟವನ್ನು ಮುಂದುವರೆಸಿದ್ದಾಳೆ. ಸಮಾಜ ಈ ಸಂದರ್ಭದಲ್ಲಿ ಆಕೆಯ ಪರ ನಿಲ್ಲಬೇಕೆ ಹೊರತು ಜಾತಿವಾದಿ ಆಕೆಯ ತಂದೆಯ ಪರವಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...