Homeಮುಖಪುಟಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಂತರ್ಜಾತಿ ವಿವಾಹ: ಪ್ರಣಯ್‌ ಹತ್ಯೆ, ಒಂಟಿಯಾದ ಅಮೃತ, ಆರೋಪಿಯಾದ ಆಕೆಯ ತಂದೆ ಆತ್ಮಹತ್ಯೆ, ದೇಶದ ಜಡ್ಡಗಟ್ಟಿದ ಜಾಸ್ತಿ ವ್ಯವಸ್ಥೆ... ಒಂದಕ್ಕೊಂದು ಸೇರಿಕೊಂಡ ಗೋಜಲುಗಳು

- Advertisement -
- Advertisement -

ಅಮೃತಾ- ಪ್ರಣಯ್‌ ಅಂತರ್ಜಾತಿ ವಿವಾಹದ ಕಾರಣಕ್ಕೆ ತೆಲಂಗಾಣವಲ್ಲದೇ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪ್ರಣಯ್ ಹತ್ಯೆಯ ಮುಖ್ಯ ಆರೋಪಿಯಾಗಿದ್ದ ಅಮೃತಾಳ ತಂದೆ ಮಾರುತಿರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಷ್ಟಕ್ಕೆ ಕೆಲವರು ನ್ಯಾಯ ಸಿಕ್ಕಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ದೇಶದ ಜಾತಿ ವ್ಯವಸ್ಥೆ ಅಷ್ಟು ಸುಲಭವಲ್ಲ ಎಂಬುದು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದೆ.

ಕಳೆದ ವರ್ಷ ತೆಲಂಗಾಣದ ನಲ್ಗೋಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.


ಇದನ್ನೂ ಓದಿ : ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?


ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮಾರುತಿರಾವ್ ಮತ್ತು ಆತನ ಗೂಂಡಾಗಳು 2018 ಸೆಪ್ಟೆಂಬರ್ 14ರಂದು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಇಡೀ ದೇಶ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಆ ಸಂದರ್ಭದಲ್ಲಿ ನೊಂದು ಬೆಂದು ಒಂಟಿಯಾದ ಅಮೃತಾ ಏನು ಮಾಡಬೇಕು? ತುಂಬು ಗರ್ಭಿಣಿಯಾದ ಅವಳು ತನ್ನ ಗಂಡನನ್ನು ತನ್ನ ಕಣ್ಣಾರೆ ಕೊಂದ ಅಪ್ಪನ ಮನೆಗೆ ಹೋಗಬೇಕೆ? ಇಲ್ಲ ತನ್ನ ಗಂಡನಿಲ್ಲದಿದ್ದರೂ ಗಂಡನ ಮನೆಯಲ್ಲಿ ಇರಬೇಕೆ ಎಂಬುದರ ಕುರಿತು ಗೊಂದಲಗೊಂಡಳು. ಆದರೆ ಕೊನೆಗೆ ತನ್ನ ಅಪ್ಪನ ವಿರುದ್ಧ ದೂರು ನೀಡಿ ತನ್ನ ಗಂಡನ ಮನೆಯಲ್ಲಿಯೇ ಉಳಿದುಕೊಂಡಳು. ಪ್ರಣಯ್‌ನ ತಂದೆ ತಾಯಿಯರು ಸಹ ಮಗ ಬಲಿಯಾದರೂ ಸೊಸೆ ಅಮೃತಾಳನ್ನು ಮನೆ ಮಗಳಂತೆ ನೋಡಿಕೊಳ್ಳಲು ಆರಂಭಿಸಿದರು. ಅಮೃತಾಗೆ ಮುದ್ದಾದ ಗಂಡು ಮಗು ಹುಟ್ಟಿದೆ. ಆ ಮಗುವಿಗೆ ನಿಹಾನ್‌ ಎಂದು ಹೆಸರಿಡಲಾಗಿದೆ.

ಈಗ ಒಂದೂವರೆ ವರ್ಷದ ಬಳಿಕ ಆ ಪ್ರಕರಣದ ಪ್ರಮುಖ ಆರೋಪಿ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಳ್ಳುವಾಗ ಬರೆದ ಪತ್ರದಲ್ಲಿ “ಗಿರಿಜಾ (ಹೆಂಡತಿ) ಕ್ಷಮಿಸು, ಅಮೃತ(ಮಗಳು) ಅಮ್ಮನ ಹತ್ತಿರ ಬಾ’ ಎಂದು ಮನವಿ ಮಾಡಿದ್ದಾನೆ.

ಈಗ ಬಹಳಷ್ಟು ಜಾತಿವಾದಿಗಳು ಅಮೃತಾ ಮೇಲೆ ಮುಗಿಬಿದ್ದಿದ್ದಾರೆ. ನಿನ್ನಿಂದಾಗಿ ನಮ್ಮ ಸಮದಾಯದ ಮಾನ ಮರ್ಯಾದೆ ಹಾಳಾಗಿದ್ದಲ್ಲದೇ ನಿನ್ನ ಅಪ್ಪನ ಸಾವಿಗೂ ನೀನೇ ಕಾರಣಳಾಗಿದ್ದೀಯ. ನಿನ್ನ ತಾಯಿ ಒಂಟಿಯಾಗಲು ನೀನೇ ಕಾರಣಳಾಗಿದ್ದೀಯ.. ಈಗಲಾದರೂ ನಿನ್ನ ತವರು ಮನೆಗೆ ಬಂದು ನಿನ್ನ ಒಬ್ಬಂಟಿ ತಾಯಿಯನ್ನು ನೋಡಿಕೊ ಎಂದು ಉಪದೇಶಗಳನ್ನು ನೀಡುತ್ತಿದ್ದಾರೆ.

ನಿನ್ನ ತಂದೆ ಪಶ್ಚಾತಾಪಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ನಿನಗೆ ಪಶ್ಚಾತಾಪವಿಲ್ಲ ನೋಡು ಎಂದು ಹಂಗಿಸುತ್ತಿದ್ದಾರೆ. ಒಟ್ಟಿನಲ್ಲಿ ತನ್ನ ಮಗಳನ್ನೇ ಕೊಂದ ಕೊಲೆಗಡುಕ, ಜಾತಿ ಕ್ರಿಮಿ ಮಾರುತಿರಾವ್‌ ಮೇಲೆ ಅನುಕಂಪ ತೋರಿಸುತ್ತಾ, ಸಂತ್ರಸ್ತೆಯಾದ ಅಮೃತಾಳನ್ನೇ ವಿಲನ್‌ ಮಾಡಲು ನೋಡುತ್ತಿದ್ದಾರೆ.

ವಾಸ್ತವವೇನು

ಅಮೃತಾ ದೂರು ನೀಡಿದ ನಂತರ ಮಾರುತಿರಾವ್ ಮತ್ತು ಆತನ ಸಹಚರರ ಮೇಲೆ ಬಲವಾದ ಕೇಸುಗಳು ಬಿದ್ದಿದ್ದು ಕೋರ್ಟ್‍ಗೆ ಅಲೆಯುತ್ತಿದ್ದ. ಇತ್ತಿಚೆಗೆ ಅಮೃತಾಳನ್ನು ತನ್ನ ಮನೆಗೆ ಬಂದರೆ ಆಸ್ತಿಯೆಲ್ಲ ಬರೆದುಕೊಡುವುದಾಗಿ ಹೇಳಿ ಬೆದರಿಕೆ ಹಾಕಿಸಿದರು ಅಮೃತಾ ಜಗ್ಗದೇ ಮತ್ತೆ ಈ ಬೆದರಿಕೆಯ ವಿಚಾರದ ಕುರಿತು ಪೋಲೀಸರಿಗೆ ದೂರು ನೀಡಿದ್ದಳು. ಮಾರುತಿರಾವ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು ಸಾಕಷ್ಟು ಆಸ್ತಿ ಮಾಡಿದ್ದಾನೆ. ಈ ಕುರಿತು ಆತ ಮತ್ತು ಆತನ ಸಹೋದರ ಶ್ರವಣ್ ನಡುವೆ ಜಗಳ ಸಹ ನಡೆಯುತ್ತಿತ್ತು.

ಮಾರುತಿರಾವ್‌ ಸಹೋದರ ಶ್ರವಣ್‌ ಕೂಡ ಕೊಲೆ ಆರೋಪಿಯಾಗಿದ್ದ. ಹಾಗಾಗಿ ಆತ ಪದೇ ಪದೇ ಕೊಲೆ ಕೇಸಿನಲ್ಲಿ ನಾನು ಅಲೆಯುತ್ತಿದ್ದೇನೆ. ನಿನಗಿದ್ದ ಒಬ್ಬಳೇ ಮಗಳು ಸಹ ನಿನ್ನ ಜೊತೆಗಿಲ್ಲ ಮಾತ್ರವಲ್ಲದೇ ನಿನ್ನ ವಿರುದ್ಧವೇ ದೂರು ನೀಡುತ್ತಿದ್ದಾಳೆ. ಹಾಗಾಗಿ ಆಕೆಯನ್ನು ಮುಗಿಸಿಬಿಡು, ನಿನ್ನ ಆಸ್ತಿಯನ್ನೆಲ್ಲ ನನ್ನ ಹೆಸರಿಗೆ ಬರೆದುಕೊಂಡು ಎಂದು ದುಂಬಾಲು ಬಿದ್ದಿದ್ದ ಎಂಬ ಸತ್ಯಗಳು ಒಂದೊಂದೇ ಹೊರಬರುತ್ತಿವೆ.

ಇದೆಲ್ಲವೂ ಅಮೃತಾಳ ಗಮನಕ್ಕೆ ಬಂದಿತ್ತು. ಹಾಗಾಗಿಯೇ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅಕೆ “ನನ್ನ ತಂದೆ ಮಾರುತಿರಾವ್ ಹೆದರಿಕೆಯ ವ್ಯಕ್ತಿಯಲ್ಲ. ಪಶ್ಚಾತ್ತಾಪದಿಂದ ಆತ್ಮಹತ್ಯೆ ಮಾಡಿಕೊಳ್ಳುವವರಾಗಿದ್ದರೆ ಈ ಹಿಂದೆಯೇ ಮಾಡಿಕೊಳ್ಳುತ್ತಿದ್ದರು. ನಮ್ಮ ಚಿಕ್ಕಪ್ಪ ಶ್ರವಣ್ ಜೊತೆ ನಮ್ಮ ತಂದೆಗೆ ಹಲವಾರು ಭಾರಿ ಆಸ್ತಿ ಜಗಳ ಆಗಿದೆ ಎಂದು ಕೇಳಿದ್ದೆ, ಈ ಆತ್ಮಹತ್ಯೆಗೆ ಇದೇ ಕಾರಣವು ಇರಬಹುದು” ಎಂಬ ಸಂದೇಹ ವ್ಯಕ್ತಪಡಿಸಿದ್ದಾಳೆ.

ಒಬ್ಬ ವ್ಯಕ್ತಿಗೆ ತನ್ನನ್ನು ತಾನು ಕೊಂದುಕೊಳ್ಳುವ ಮತ್ತು ಇನ್ನೊಬ್ಬರನ್ನು ಕೊಲ್ಲವ ಯಾವುದೇ ಹಕ್ಕು ಇಲ್ಲ. ನ್ಯಾಯಾಲಯದ ಮೂಲಕ ನಮ್ಮ ತಂದೆಗೆ ಯಾವುದೇ ರೀತಿಯ ಶಿಕ್ಷೆ ಆಗಿದ್ದರೂ ಸಹ ನಾನು ಸ್ವಾಗತಿಸುತ್ತಿದ್ದೆ. ಆದರೆ ಈ ಆತ್ಮಹತ್ಯೆ ಮಾಡಿಕೊಂಡಿರುವ ವೀಚಾರ ನೋವನ್ನು ತಂದಿದೆ. ಗಂಡ ತೀರಿಕೊಂಡರೆ ಆ ಹೆಂಡತಿಯ ಸ್ಥಿತಿ ಹೇಗಿರುತ್ತದೆ ಎಂದು ನನಗೆ ಒಂದೂವರೆ ವರ್ಷದಿಂದ ಅನುಭವವಾಗಿದೆ. ಹಾಗಾಗಿಯೇ ನಮ್ಮ ತಾಯಿಯನ್ನು ಮಾತಾಡಿಸಲು ಹೋಗಿದ್ದೆ. ಆದರೆ ಅಲ್ಲಿನ ನಮ್ಮ ಕುಟುಂಬಸ್ಥರು ನನಗೆ ಅನುಮತಿ ನೀಡಲಿಲ್ಲ. ಮಗನನ್ನು ಕಳೆದುಕೊಂಡ ನನ್ನ ಅತ್ತೆ-ಮಾವನನ್ನು ನಾನು ಬಿಟ್ಟುಹೋಗಲು ಸಾಧ್ಯವಿಲ್ಲ. ಆದರೆ ನನ್ನ ತಾಯಿಯು ನನ್ನ ಜೊತೆ ಬಂದರೆ ನಾನೇ ನೋಡಿಕೊಳ್ಳುತ್ತೇನೆ. ನನಗೆ ಮಾರುತಿರಾವ್‍ನ ಯಾವ ಆಸ್ತಿಯ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾಳೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು


ಆ ಮೂಲಕ ಜಾತಿಗಿಂತ ಮಾನವೀಯತೆ ಮತ್ತು ಮನುಷ್ಯ ಸಂಬಂಧಗಳು ಮುಖ್ಯ ಎಂದು ಸಾರಿದ್ದಾಳೆ. ಆಕೆ ಪ್ರಬುದ್ಧವಾಗಿ ನಡೆದುಕೊಂಡಿದ್ದಾಳೆ. ಆದರೆ ಆಕೆಯ ಕುಟುಂಬ ಮಾತ್ರ ಇನ್ನು ಜಾತಿಗ್ರಸ್ಥ ಮನಸ್ಥಿತಿಯಿಂದ ಹೊರಬಂದಿಲ್ಲ. ಇದು ಈ ದೇಶದ ದುಸ್ಥಿತಿಯಾಗಿದೆ. ಹಾಗಾಗಿಯೇ ಜಸ್ಟೀಸ್ ಫಾರ್‌ ಪ್ರಣಯ್‌ ಎಂಬ ಅಭಿಯಾನದ ಮೂಲಕ ಅಮೃತಾ ತನ್ನ ಹೋರಾಟವನ್ನು ಮುಂದುವರೆಸಿದ್ದಾಳೆ. ಸಮಾಜ ಈ ಸಂದರ್ಭದಲ್ಲಿ ಆಕೆಯ ಪರ ನಿಲ್ಲಬೇಕೆ ಹೊರತು ಜಾತಿವಾದಿ ಆಕೆಯ ತಂದೆಯ ಪರವಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....