Homeಅಂಕಣಗಳುಜನತಾ ಮನೆಗಳ ನಿರ್ಮಾಣಕ್ಕೆ ದಿನವೊಂದಕ್ಕೆ 70 ಕಿ.ಮೀ ಸೈಕಲ್ ತುಳಿಯುತ್ತಿದ್ದ ದಿನಗಳು - ಪ್ರಸಾದ್ ರಕ್ಷಿದಿ

ಜನತಾ ಮನೆಗಳ ನಿರ್ಮಾಣಕ್ಕೆ ದಿನವೊಂದಕ್ಕೆ 70 ಕಿ.ಮೀ ಸೈಕಲ್ ತುಳಿಯುತ್ತಿದ್ದ ದಿನಗಳು – ಪ್ರಸಾದ್ ರಕ್ಷಿದಿ

- Advertisement -
- Advertisement -

ಕಳೆದುಹೋದ ದಿನಗಳು -21

ವಸತಿ ಇಲ್ಲದವರಿಗಾಗಿ ಮನೆಗಳ ಕೆಲಸ ಪ್ರಾರಂಭವಾಗಿತ್ತು. ನನ್ನ ಓಡಾಡ ಮತ್ತಷ್ಟು ಹೆಚ್ಚಿತು. ಮೊದಲು ಮನೆಕಟ್ಟಲು ಸ್ಥಳ ಗುರುತಿಸುವ ಕೆಲಸ ಮಾಡಬೇಕಿತ್ತು. ಆಗ ಹಲವಾರು ಕಡೆಗಳಲ್ಲಿ ಸ್ಥಳೀಯ ಭೂಮಾಲಿಕರಿಂದ ವಿರೋಧ ಪ್ರಾರಂಭವಾಯಿತು. ಅಲ್ಲಿ ಬೇಡ, ಇಲ್ಲಿ ಬೇಡ ಎನ್ನುವವರು. ಹಾಗಾದರೆ ಸ್ಥಳ ನೀವೇ ತೋರಿಸಿ ಎಂದರೆ, ಯಾವುದೂ ಗುಡ್ಡದ ತುದಿಯ ಜಾಗ ತೋರಿಸುವರು. ಇಲ್ಲವೇ ಇಂದು ನಾಳೆ ಎಂದು ಕಾಲಹರಣ ಮಾಡುವರು.

ಕೆಲವರು ಆಗಲೇ ಖಾಲಿ ಇದ್ದ ಸರ್ಕಾರಿ ಜಾಗಕ್ಕೆ ಬೇಲಿ ಸುತ್ತತೊಡಗಿದರು. ಗಣಪಯ್ಯನವರಿಂದ ಉಪಕಾರ ಪಡೆದವರೇ ಕೆಲವರು ಈಗ “ಗಣಪಯ್ಯ ದಲಿತರನ್ನು ಎತ್ತಿಕಟ್ಟುತ್ತಿದ್ದಾರೆ. ಅವರ ತೋಟದಲ್ಲಿ ಮನೆ ಕಟ್ಸಿ ಕೊಡ್ಲಿ” ಎಂದು ಹಿಂದಿನಿಂದ ದೂರತೊಡಗಿದರು.

ಗಣಪಯ್ಯನವರು ರಾಜಕೀಯವಾಗಿಯೂ ಶಕ್ತರಾಗಿದ್ದುದರಿಂದ ಅಧಿಕಾರಿಗಳ ಮಟ್ಟದಲ್ಲಿ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಯಿತು. ಅವರು ಅಧಿಕಾರಿಗಳನ್ನು ಸ್ಥಳಕ್ಕೇ ಕರಸಿಕೊಂಡು ಅವರ ಸಮ್ಮುಖದಲ್ಲೇ ಮನೆ ಕಟ್ಟಲು ಸ್ಥಳ ನಿಗದಿ ಮಾಡುತ್ತ ಹೋದರು. ಹತ್ತು ಇಪ್ಪತ್ತು ಮನೆಗಳ ಗುಂಪುಗಳು ಅಲ್ಲಲ್ಲಿ ರಚನೆಯಾದವು.

ಗಣಪಯ್ಯ ತಮ್ಮ ಕಾರ್ಯಕ್ಷೇತ್ರದಲ್ಲಿ, ಮೊಮ್ಮಕ್ಕಳೊಂದಿಗೆ

ಅಂತೂ ಹೇಗೋ ಮನೆಗಳ ಕೆಲಸ ಪ್ರಾರಂಭವಾಯಿತು. ಹೆಂಚು, ಮತ್ತು ಮರಗಳಿಗೆಂದು ಒಂದು ಸಾವಿರ ಕಳೆದು ಉಳಿದ ಒಂದು ಸಾವಿರ ಹಣವನ್ನು ಕಂತು ಕಂತಾಗಿ ಕೊಡುತ್ತಿದ್ದರು. ಗಣಪಯ್ಯ ಮತ್ತು ರವೀಂದ್ರನಾಥರು ಇರುವುದರಿಂದ ಬಿಲ್ ಆಗುವಾಗ ಅಷ್ಟೂ ಹಣ ಯಾವುದೇ ಕಡಿತಗಳಿಲ್ಲದೆ ಬರುತ್ತಿತ್ತು.

ಬ್ಯಾಂಕಿನಲ್ಲಿ ಮಂಜೂರಾಗಿದ್ದ ಸಾಲದ ಮೊತ್ತವನ್ನು ಮೊದಲು ಪಡೆದು ಕೆಲಸ ಪ್ರಾರಂಭಿಸಿದೆವು.

ಕಲ್ಲು, ಸಿಮೆಂಟು, ಮುಂತಾದವುಗಳಿಗೆ ಮಾತ್ರ ಹಣ ಪಾವತಿ ಮತ್ತೆ ಉಳಿದ ಕೆಲಸಗಳಲ್ಲಿ ಮರಗೆಲಸವೊಂದನ್ನು ಬಿಟ್ಟು ಉಳಿದ ಎಲ್ಲ ಕೆಲಸಗಳನ್ನು ಆಯಾ ಗುಂಪಿನವರು ಸೇರಿ ಮಾಡಬೇಕು. ಆ ಕೆಲಸಗಳಿಗೆ ಆಯಾ ದಿನದ ಮಜೂರಿಯನ್ನು ಅವರು ಅದೇ ಹಣದಲ್ಲಿ ಪಡೆದುಕೊಳ್ಳಬೇಕು. ಇದರಿಂದ ಅವರ ಹಣ ಅವರಿಗೇ ಹಿಂದಿರುಗುತ್ತಿತ್ತು ಅಲ್ಲದೆ ಉಳಿತಾಯವಾದರೆ ಅವರಿಗೇ ಸಲ್ಲುತ್ತಿತ್ತು ಇದು ಯೋಜನೆ.

ಪ್ರಾರಂಭದಲ್ಲಿ ಎಲ್ಲರೂ ಉತ್ಸಾಹದಿಂದ ಬಂದರು. ಆದರೆ ಅವರಲ್ಲಿ ಹೆಚ್ಚಿನವರಿಗೆ ಈ ರೀತಿ ಕೆಲಸ ಮಾಡಿದ ಅನುಭವವಾಗಲೀ ಸಹಕಾರಿ ತತ್ವದ ದುಡಿಮೆಯ ಬಗ್ಗೆ ತಿಳುವಳಿಕೆಯಾಗಲೀ ಇಲ್ಲದ್ದರಿಂದ ತನ್ನ ಮನೆ ಕೆಲಸ ಇರುವಾಗ ಬರುವುದು, ಬೇರೆಯವನ ಮನೆಕೆಲಸ ಇದ್ದಾಗ ತಪ್ಪಿಸಿಕೊಳ್ಳುವುದು ಹೀಗೆಲ್ಲ ಮಾಡುತ್ತಿದ್ದರು. ಅದಲ್ಲದೆ ಇವರೆಲ್ಲರೂ ಯಾವಾಗಲೂ ಬೇರೆಯವರ ತೋಟಗಳಿಗೆ ಕೆಲಸಕ್ಕೆ ಹೋಗುವವರು. ಹೆಚ್ಚಿನವರು ಅಲ್ಲಿ ಸಾಲ ಪಡೆದವರೇ ಆಗಿದ್ದುರಿಂದ ಅವರಿಂದಲೂ ಒತ್ತಡವಿರುತ್ತಿತ್ತು. ಈ ಎಲ್ಲ ಕಾರಣಗಳಿಂದ ನಾವು ಯೋಚಿಸಿದಷ್ಟು ಬೇಗನೆ ಕೆಲಸ ಮುಗಿಯುತ್ತಿರಲಿಲ್ಲ.

ಬ್ಯಾಂಕಿಗೆ ಹೋಗುವುದು, ಬಿಲ್ ಮಾಡಿಸುವುದು, ಅಂದಿನ ತಾಲ್ಲೂಕು ಅಭಿವೃದ್ಧಿ ಮಂಡಳಿ ಕಛೇರಿಯಿಂದ ಹೆಂಚುಗಳನ್ನು ಪಡೆದುಕೊಳ್ಳುವುದು, ಮಿಲ್ಲಿನಿಂದ ಮರ ಮುಟ್ಟುಗಳನ್ನು ಸಾಗಿಸುವುದು, ಜೊತೆಗೆ ಇವರೆಲ್ಲರ ಕೆಲಸದ ಲೆಕ್ಕವಿಟ್ಟು ಬಟವಾಡೆ ಮಾಡುವುದೂ ನನ್ನ ಕೆಲಸವಾಗಿತ್ತು. ಹಾಗಾಗಿ ನಾನು ಇವರ ಮೇಲೆಲ್ಲಾ ಕೂಗಾಡುವುದೂ ಬೈಯುವುದೂ ಸಮಾಧಾನ ಮಾಡುವುದೂ ಜೊತೆಗೆ ತತ್ವ ಸಿದ್ಧಾಂತಗಳ ಬಗ್ಗೆ ಭಾಷಣ ಮಾಡುವುದೂ ಎಲ್ಲ ಇತ್ತು.

ಅವರಿಗೆಲ್ಲ ತಿಳುವಳಿಕೆಯೇ ಇರಲಿಲ್ಲವೆಂದಲ್ಲ ಅವರೆಲ್ಲ ಈ ರೀತಿ ನಡೆದುಕೊಳ್ಳಲು ಅದಕ್ಕೆ ಹಲವಾರು ಕಾರಣಗಳಿದ್ದವು. ಅದು ನನಗೆ ಮುಂದೆ ತಿಳಿಯಿತು.

ಈ ಮನೆಗಳಲ್ಲಿ ನೂರಾರು ಮನೆಗಳ ಮರಗೆಲಸವನ್ನು ನನ್ನ ರಂಗ ಸಂಗಾತಿ ಉಗ್ಗಪ್ಪ ಮನೆಯೊಂದಕ್ಕೆ ನೂರ ನಲುವತ್ತು ರೂಪಾಯಿಗಳಿಗೆ ಗುತ್ತಿಗೆ ಪಡೆದಿದ್ದ. ಹಾಗಾಗಿ ಆತನೂ ಹಲವು ಸಲ ನನ್ನ ಜೊತೆ ಇರುತ್ತಿದ್ದ. ಆಗ ಇಬ್ಬರೂ ಸೈಕಲ್ಲಿನಲ್ಲಿ ಡಬ್ಬಲ್ ರೈಡ್‌ನಲ್ಲಿ ಬರುತ್ತಿದ್ದೆವು.

ಈ ಕೆಲಸಗಳಿಗಾಗಿ ಬೆಳಗ್ಗಿನ ಡೈರಿ ಸುತ್ತು ಕೆಲಸ ಮತ್ತು ಹಾಲು ಕರೆಯುವುದು ಮುಗಿಸಿ ನಂತರ ಸೈಕಲ್ ತೆಗೆದುಕೊಂಡು ಹೊರಟೆನೆಂದರೆ, ಈ ಮನೆಗಳ ಕೆಲಸ ನಡೆಯುತ್ತಿದ್ದ ಅಗಲಟ್ಟಿ, ಮಾವಿನ ಹಳ್ಳಿ, ಹಾರ್ಲೆ ಕೂಡಿಗೆ, ಗಾಣದಹೊಳೆ, ಕೃಷ್ಣಾಪುರ ಅಲ್ಲಿಂದ ಹೆನ್ನಲಿ, ಹೆಬ್ಬಸಾಲೆ ಮಾರ್ಗವಾಗಿ ಹೇಮಾವತಿ ಹೊಳೆಬದಿಯಲ್ಲೇ ಸಕಲೇಶಪುರದ ರೈಲ್ವೇ ಸ್ಟೇಷನ್‌ಗಾಗಿ ನಗರ ಸೇರುತ್ತಿದ್ದೆ. ಅಲ್ಲಿಂದ ಮುಂದೆ ಹಲವು ಕಛೇರಿಗಳನ್ನು ಮುಖ್ಯರಸ್ತೆಯಲ್ಲೇ ಬಂದು ಕೆಲವು ಸಲ ಹಾರ್ಲೆಗೂ ಹೋಗುತ್ತಿದ್ದೆ. ನಂತರ ಕೆಲವೊಮ್ಮೆ ಪಶು ಚಿಕಿತ್ಸೆಯ ಓಡಾಟಗಳು, ನಮ್ಮ ತಂಡದ ರಂಗ ಚಟುವಟಿಕೆಗಳ ಕೆಲಸಗಳು ಎಲ್ಲ ಸೇರಿ ದಿನವೊಂದಕ್ಕೆ ಎಪ್ಪತ್ತು ಕಿ.ಮೀ ನಷ್ಟು ಸೈಕಲ್ ಸವಾರಿ ಮಾಡಿದ್ದೂ ಇದೆ.

ಈ ಮನೆಗಳನ್ನು ಕಟ್ಟುವ ಕೆಲಸದ ಉಸ್ತುವಾರಿಯಲ್ಲಿ ಕೆಲವು ತಮಾಷೆಯ ಪ್ರಸಂಗಗಳು ನಡೆದವು. ಒಬ್ಬಾತ ದ್ಯಾವಯ್ಯ ಅಂತ, ಸ್ವಲ್ಪ ಉಡಾಫೆಯ ಮನುಷ್ಯ ನಮ್ಮೂರ ಪಕ್ಕದಲ್ಲೇ ಒಬ್ಬರ ತೋಟದಲ್ಲಿ ಕೆಲಸಕ್ಕೆ ಹೋಗುತ್ತಿದ್ದ. ಬೇರೆಯವರದ್ದಿರಲಿ ಆತನದೇ ಮನೆಯ ಯಾವ ಕೆಲಸಕ್ಕೂ ಸರಿಯಾಗಿ ಬರಲೇ ಇಲ್ಲ. ಅಂತೂ ನಾವು ಯಾರು ಯಾರನ್ನೋ ಕರೆದು ಕೆಲಸ ಮುಗಿಸುತ್ತ ಬಂದೆವು. ಕೊನೆಗೆ ನಾನೂ ಉಗ್ಗಪ್ಪನೂ ಮಾತಾಡಿ ಇವನಿಗೆ ಬುದ್ಧಿಕಲಿಸಬೇಕೆಂದು ತೀರ್ಮಾನಿಸಿ, ಏನಾದರೂ ಸರಿ ಇವನ ಮನೆಗೆ ಹೆಂಚು ಹಾಕಬಾರದೆಂದು ಹೆಂಚುಗಳನ್ನು ಹಾಗೇ ಇಟ್ಟೆವು. ರಸ್ತೆ ಬದಿಯಿಂದ ನೂರಡಿ ದೂರ ಹೆಂಚುಗಳನ್ನು ಹೊರಬೇಕಿತ್ತು. ಎಲ್ಲರ ಮನೆಯೂ ಪೂರ್ತಿಯಾಯಿತು. ನಾವು ಕೆಲವು ದಿನ ಕಾದೆವು. ಹೆಂಚುಗಳು ಅಲ್ಲೇ ಇದ್ದವು ಹೊರತು ಆತ ಅದರ ಕಡೆ ತಿರುಗಿ ನೋಡಲೂ ಇಲ್ಲ. ತಮ್ಮ ಮನೆ ಕೆಲಸಕ್ಕೆ ಆತ ಬರದಿದ್ದುದರಿಂದ ಬೇರೆಯವರೂ ಅವನೆ ಮನೆ ಕೆಲಸಕ್ಕೆ ಬರುವುದಿಲ್ಲವೆಂದು ಕುಳಿತರು. ಬಿಲ್ ಮಾಡಿಸಬೇಕಲ್ಲ? ಮನೆ ಪೂರ್ತಿಯಾಗದೆ ಬಿಲ್‌ನ ಹಣ ದೊರೆಯದು. ಕೊನೆಗೆ ನಾನೂ ಉಗ್ಗಪ್ಪನೂ ಸೇರಿ ಆರುನೂರು ಹೆಂಚುಗಳನ್ನು ಹೊತ್ತು ಮಾಡಿಗೇರಿಸಿ ಬಿಲ್ ಮಾಡಿಸಬೇಕಾಯಿತು!

ಮತ್ತೊಮ್ಮೆ ದ್ಯಾವಯ್ಯ ಸಿಕ್ಕಿದಾಗ ನಾನೂ ಉಗ್ಗಪ್ಪನೂ ಸೇರಿ ಬಾಯಿಗೆ ಬಂದಂತೆ ಬೈದೆವು. ಅದಕ್ಕೂ ಅತನೇನು ತಲೆಕೆಡಿಸಿಕೊಂಡಂತೆ ಕಾಣಲಿಲ್ಲ.

ಇದಕ್ಕೆ ಕಾರಣವೂ ಇತ್ತು. ಸಾಮಾನ್ಯವಾಗಿ ಇಂಥ ಮನೆಗಳನ್ನು ಕಟ್ಟುವಾಗ ಯಾರಾದರೂ ರಾಜಕೀಯ ವ್ಯಕ್ತಿಗಳು ತಮ್ಮ ಕಡೆಯವರಿಗೆ ಕಂಟ್ರಾಕ್ಟ್ ಕೊಡಿಸಿ ಅವರು ಒಂದು ಮನೆಯ ಆಕಾರದ ಕಟ್ಟಡವನ್ನು ಕಟ್ಟಿ ಇವರಿಂದ ರುಜುಪಡೆದು ಮನೆಯನ್ನು ಇವರಿಗೆ ಒಪ್ಪಿಸಿ ತಾವೊಂದಷ್ಟು ಕಮಾಯಿ ಮಾಡುವ ಕ್ರಮ ಅಗಲೇ ಪ್ರಾರಂಭವಾಗಿತ್ತು. ಆದ್ದರಿಂದ ಗಣಪಯ್ಯನವರ ಸ್ವಾವಲಂಬಿ ನಿರ್ಮಾಣ ಕ್ರಮ ಅರ್ಥವಾಗದೆ ಇದರಲ್ಲಿ ಇವರಿಗೇನೋ ಲಾಭವಿದೆ ಆದ್ದರಿಂದ ಇವರೇ ಮಾಡಿಸಲಿ ಎಂದು ತಿಳಿಯುತ್ತಿದ್ದರು.

ಮತ್ತೊಂದು ಕಡೆ ಇದೇ ರೀತಿ ಮನೆಗಳನ್ನು ಕಟ್ಟುವಾಗ ಕೆಲವು ಮನೆಗಳಿಗೆ ಬರಬೇಕಾದ ಹೆಂಚುಗಳು ಸಮಯಕ್ಕೆ ಸರಿಯಾಗಿ ಬರಲಿಲ್ಲ. ಸರ್ಕಾರದ ಟೆಂಡರಿಗೆ ಹೆಂಚಿನ ಕಾರ್ಖಾನೆಗಳು ಸ್ಪರ್ಧೆಯಿಂದ ಕಡಿಮೆಗೆ ಬಿಡ್ ಮಾಡಿ ಕಳಪೆ ಹೆಂಚುಗಳನ್ನು ಕೊಡುತ್ತಿದ್ದರು ಇದಕ್ಕಾಗಿ ನಾವು ದೂರು ಸಲ್ಲಿಸಿದ್ದರಿಂದ ಅದನ್ನೂ ಸಮಯಕ್ಕೆ ಕೊಡದೆ ಸತಾಯಿಸಿದರು. ಮಳೆಗಾಲ ಪ್ರಾರಂಭವಾದರೂ ಹೆಂಚುಗಳು ಬರುವ ಲಕ್ಷಣಗಳು ಕಾಣಿಸಲಿಲ್ಲ. ಕೊನೆಗೆ ಹಾರ್ಲೆಯಲ್ಲಿ ಒಂದು ಕಟ್ಟಡ ರಿಪೇರಿಗೆಂದು ಬಿಚ್ಚಿದ ಸುಮಾರು ನಾಲ್ಕು ಸಾವಿರ ಹೆಂಚುಗಳಿದ್ದವು. ಅವು ಹಳೆಯದಾದರೂ ಉತ್ತಮ ಗುಣ ಮಟ್ಟದ ಬಾಸೆಲ್ ಮಿಷನ್ ಹೆಂಚುಗಳು. ಅದನ್ನೇ ತೆಗೆದುಕೊಂಡು ಹೋಗುವಂತೆ ಗಣಪಯ್ಯ ಹೇಳಿದರು.

ನಾವು ಆ ಹೆಂಚುಗಳನ್ನು ಒಯ್ದು ಬಾಕಿ ಉಳಿದಿದ್ದ ಮನೆಗಳಿಗೆ ಹೊದೆಸಿ ಗೋಡೆಗಳು ಬೀಳದಂತೆ ರಕ್ಷಿಸಿದೆವು. ಅದನ್ನು ನೋಡಿ ಕೆಲವರು “ಗಣಪಯ್ಯ ಹೊಸ ಹೆಂಚು ತೋಟಕ್ಕೆ ಸಾಗಿಸಿ ಹಳೆ ಹೆಂಚು ಇವರ ತಲೆಗೆ ಕಟ್ಟಿದ್ದಾರೆ” ಎಂದು ಪ್ರಚಾರ ಮಾಡಿದರು.

ಈ ನೆಲ-ಮನೆಗಳ ಯೋಜನೆ ಕೆಲಸಗಳಿಗಾಗಿ ಗಣಪಯ್ಯ ತಮ್ಮ ಸ್ವಂತ ಹಣ ಖರ್ಚು ಮಾಡಿದ್ದು ಅಂದಿನ ಕಾಲದಲ್ಲೇ ಲಕ್ಷಗಳಲ್ಲಿತ್ತು.

ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ: ‘ನಮ್ಮ ಎಲುಬುಗಳ ಮೇಲೆ’ – ನಾವು ಪ್ರದರ್ಶಿಸಿದ ಮೊದಲ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...