Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...