Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...