Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...