Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...