Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...