Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...