Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...