Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...