Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...