Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...