Homeಮುಖಪುಟಪ್ರಶಾಂತ್ ಭೂಷಣ್ 1 ರೂ ದಂಡ ಕಟ್ಟುವರೋ, ಇಲ್ಲ ಜೈಲಿಗೆ ಹೋಗುವರೋ?

ಪ್ರಶಾಂತ್ ಭೂಷಣ್ 1 ರೂ ದಂಡ ಕಟ್ಟುವರೋ, ಇಲ್ಲ ಜೈಲಿಗೆ ಹೋಗುವರೋ?

"1 ರೂ ರಾಷ್ಟ್ರೀಯ ಚಳವಳಿಯಾಗಲಿ" ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರು ಮತ್ತು ಪ್ರಶಾಂತ್ ಭೂಷಣ್‌ರವರ ಆತ್ಮೀಯ ಒಡನಾಡಿ ಯೋಗೇಂದ್ರ ಯಾದವ್ ಘೋಷಿಸಿದ್ದಾರೆ.

- Advertisement -
- Advertisement -

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಲ ಕಾಲ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಬೇಷರತ್ ಕ್ಷಮೆ ಕೇಳಿದ್ದಲ್ಲಿ ಪ್ರಕರಣ ರದ್ದು ಮಾಡುವುದಾಗಿ ಮೂರು ಬಾರಿ ಸುಪ್ರೀಂ ಅವಕಾಶ ನೀಡಿದಾಗಲೂ ಪ್ರಶಾಂತ್ ಭೂಷಣ್ ದಿಟ್ಟ ದನಿಯಲ್ಲಿ ಶಿಕ್ಷೆ ಎದುರಿಸುತ್ತೇನೆ, ಕ್ಷಮೆ ಕೇಳುವುದಿಲ್ಲ ಎಂದು ನುಡಿದಿದ್ದರು.

“ತನ್ನ ಹೇಳಿಕೆಗಳು ನ್ಯಾಯಾಲಯದ ‘ರಚನಾತ್ಮಕ ವಿಮರ್ಶೆ’ಯಾಗಿದೆ. ಆದ್ದರಿಂದ ಅದನ್ನು ಹಿಂತೆಗೆದುಕೊಳ್ಳುವುದು ‘ಅಪ್ರಾಮಾಣಿಕ ಕ್ಷಮೆಯಾಚನೆ’ಯಾಗುತ್ತದೆ, ನಾನು ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ” ಎಂದು ಭೂಷಣ್ ಪದೇ ಪದೇ ಹೇಳಿದ್ದರು.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ್‌ರವರ ತಂದೆ ಶಾಂತಿ ಭೂಷಣ್‌ “ದೇಶದ ದನಿಯನ್ನು ಸುಪ್ರೀಂಕೋರ್ಟು ಕೇಳಲಿ ಎಂದು ನಾನು ಕೋರಿದ್ದೆ. ಈಗ ನಾನು ದೇಶದ ಪ್ರತಿಯೊಬ್ಬ ನಾಗರಿಕರು ಒಂದು ರೂಪಾಯಿಯನ್ನು ಸುಪ್ರೀಂಕೋರ್ಟಿಗೆ ಕಳಿಸಲಿ ಎಂದು ಕೋರುತ್ತೇನೆ” ಎಂದು ಭಾರತದ ಮಾಜಿ ಕಾನೂನು ಸಚಿವರು ಹಾಗೂ ಇಂದಿರಾಗಾಂಧಿಯವರ ವಿರುದ್ಧ ಐತಿಹಾಸಿಕ ಮೊಕದ್ದಮೆಯಲ್ಲಿ ವಾದಿಸಿದ್ದ ಶಾಂತಿ ಭೂಷಣ್ ಹೇಳಿದ್ದಾರೆ.

ದೇಶಾದ್ಯಂತ ಪ್ರಶಾಂತ್ ಭೂಷಣ್ ಅವರನ್ನು ಬೆಂಬಲಿಸಿ ಇಂದು‌ ಆನ್‌ಲೈನ್‌ನಲ್ಲಿ ನಡೆದ ‘ಸತ್ಯಮೇವ ಜಯತೇ’ ಕಾರ್ಯಕ್ರಮದಲ್ಲಿ ಅವರು ಮನವಿ ಮಾಡಿದ್ದಾರೆ.

“1 ರೂ ರಾಷ್ಟ್ರೀಯ ಚಳವಳಿಯಾಗಲಿ” ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರು ಮತ್ತು ಪ್ರಶಾಂತ್ ಭೂಷಣ್‌ರವರ ಆತ್ಮೀಯ ಒಡನಾಡಿ ಯೋಗೇಂದ್ರ ಯಾದವ್ ಘೋಷಿಸಿದ್ದಾರೆ.

ತೀರ್ಪಿನಲ್ಲಿ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಹಾಗೂ ವಕೀಲಿ ವೃತ್ತಿ ನಿ‍ಷೇಧಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಯಾವುದು ಆಯ್ದುಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಸಹಜವಾಗಿ ಎದ್ದಿದೆ. ಅವರ ಒಡನಾಡಿಗಳು ಖಂಡಿತ ಅವರು ಜೈಲು ಶಿಕ್ಷೆಯನ್ನು ಆಯ್ದುಕೊಂಡು ದೇಶಕ್ಕೆ, ಹೊರಾಟಕ್ಕೆ, ಸತ್ಯಕ್ಕೆ ಮಾದರಿಯಾಗಿ ನಿಲ್ಲುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಲು ಸಂಜೆ ಪತ್ರಿಕಾಗೋಷ್ಠಿ ನಡೆಸುವುದಾಗಿ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.


ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...