Homeಮುಖಪುಟಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು.

- Advertisement -
- Advertisement -

ಸುಪ್ರೀಮ್ ಕೋರ್ಟಿನ ಘನತೆ ಗೌರವಗಳು ಗುರುವಾರ ಅಗ್ನಿಪರೀಕ್ಷೆಗೆ ಗುರಿಯಾಗಲಿವೆ. ನ್ಯಾಯಾಂಗ ನಿಂದನೆಯ ಉರುಳಿಗೆ ಪ್ರಶಾಂತ್ ಭೂಷಣ್ ಅವರ ಕೊರಳನ್ನು ಸಿಕ್ಕಿಸುವುದು ಆಳುವ ಪಟ್ಟಭದ್ರರ ಪ್ರಯತ್ನ. ಯಾಕೆಂದರೆ ಆಳುವವರ ಪಾಲಿಗೆ ಪ್ರಶಾಂತ್ ಬೆಂಬಿಡದೆ ಕಾಡುವ ತೊಣಚಿ. ಜೊತೆಗೆ ನ್ಯಾಯಾಂಗದ ಕಾರ್ಯವೈಖರಿ- ಭ್ರಷ್ಟಾಚಾರದತ್ತ ಕಾಲ ಕಾಲಕ್ಕೆ ಬೆರಳು ಮಾಡಿ ತೋರುತ್ತ, ಅದರ ಅಂತಸ್ಸಾಕ್ಷಿಯನ್ನು ಪಾಟೀಸವಾಲಿಗೆ ಗುರಿ ಮಾಡಿರುವ ದಿಟ್ಟ ನ್ಯಾಯವಾದಿ.

ಸಾಮಾಜಿಕ ಜಾಲತಾಣ ಟ್ವೀಟ್‌ರ್‌ನಲ್ಲಿ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಕುರಿತು ಮತ್ತು ಕಳೆದ ಆರು ವರ್ಷಗಳ ಸುಪ್ರೀಮ್ ಕೋರ್ಟ್ ಕಾರ್ಯವೈಖರಿ ಕುರಿತು ಇತ್ತೀಚೆಗೆ ಎರಡು ಟ್ವೀಟ್‌ಗಳನ್ನು ಮಾಡಿದ್ದರು. ಇವುಗಳಿಂದ ನ್ಯಾಯಾಂಗ ನಿಂದನೆಯಾಗಿದೆ ಎಂಬ ತೀರ್ಮಾನಕ್ಕೆ ಬಂದಿರುವ ಸುಪ್ರೀಮ್ ಕೋರ್ಟ್ ಗುರುವಾರ ಪ್ರಶಾಂತ್ ಅವರಿಗೆ ವಿಧಿಸುವ ಶಿಕ್ಷೆಯ ಸ್ವರೂಪ ಮತ್ತು ಪ್ರಮಾಣವನ್ನು ಪ್ರಕಟಿಸಲಿದೆ.

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು. ಇಷ್ಟಕ್ಕೂ ಪ್ರಶಾಂತ್ ಟ್ವೀಟ್‌ಗಳು ಹೇಳಿದ್ದೇನು ಎಂಬುದನ್ನು ಮತ್ತೊಮ್ಮೆ ನೆನೆದು ನೋಡೋಣ:

ಟ್ವೀಟ್ 1- ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ಕದ ಬಡಿಯುವ ನಾಗರಿಕರ ಪಾಲಿಗೆ ಸುಪ್ರೀಮ್ ಕೋರ್ಟನ್ನು ಲಾಕ್‌ಡೌನ್ ಸ್ಥಿತಿಯಲ್ಲಿ ಇರಿಸಿ ಅವರಿಗೆ ನ್ಯಾಯವನ್ನು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿಯವರು ನಾಗಪುರದ ರಾಜಭವನದಲ್ಲಿ ಬಿಜೆಪಿ ನಾಯಕರೊಬ್ಬರ ಒಡೆತನದ 50 ಲಕ್ಷ ರು ಬೆಲೆ ಬಾಳುವ ಮೋಟರ್ ಸೈಕಲ್ಲನ್ನು ಏರಿ ಕುಳಿತಿದ್ದಾರೆ. ಮಾಸ್ಕ್ ಮತ್ತು ಹೆಲ್ಮೆಟ್ ಕೂಡ ಧರಿಸಿಲ್ಲ.

ಟ್ವೀಟ್ 2- ಅಧಿಕೃತ ತುರ್ತುಪರಿಸ್ಥಿತಿಯನ್ನು ಕೂಡ ಘೋಷಿಸದೆ ಕಳೆದ ಆರು ವರ್ಷಗಳ ಅವಧಿಯಲ್ಲಿ ಭಾರತದ ಜನತಂತ್ರವನ್ನು ಹೇಗೆ ನಾಶ ಮಾಡಲಾಯಿತು ಎಂಬುದನ್ನು ಭವಿಷ್ಯದಲ್ಲಿ ಇತಿಹಾಸಕಾರರು ಹೊರಳಿ ನೋಡಲಿದ್ದಾರೆ. ಆಗ ಅವರು ಈ ವಿನಾಶದಲ್ಲಿ ಸುಪ್ರೀಮ್ ಕೋರ್ಟಿನ, ಅದರಲ್ಲೂ ವಿಶೇಷವಾಗಿ ಕಳೆದ ನಾಲ್ವರು ಮುಖ್ಯನ್ಯಾಯಮೂರ್ತಿಗಳ ಪಾತ್ರವನ್ನು ರೇಖಾಂಕಿತಗೊಳಿಸಿ ಗುರುತಿಸುವರು.

ಕಾಯಿದೆ ಕಾನೂನು ನಿಷ್ಪಕ್ಷಪಾತತೆಯ ಬಟ್ಟೆಯನ್ನು ಕಣ್ಣಿಗೆ ಕಟ್ಟಿಕೊಂಡಿರುವ ನ್ಯಾಯದೇವತೆಗೆ, ದಯೆ, ಕರುಣೆ ಸಹನೆ, ಘನತೆ, ಔದಾರ್ಯ, ಕ್ಷಮೆಯ ಗುಣಗಳೂ ಇರುತ್ತವೆ. ವಿವೇಚನೆಯಿಂದ ಆಕೆ ಅದನ್ನು ಬಳಸುತ್ತಾಳೆ ಕೂಡ. ಆರೋಗ್ಯಕರವಾಗಿ ಜನಪರ ಕಾಳಜಿಗಳೊಂದಿಗೆ ಕೆಲಸ ಮಾಡಲು ಪೂರಕವಾಗುವ ಸಕಾರಾತ್ಮಕ ಟೀಕೆಯನ್ನು ಅಸಹನೆಯಿಂದ ಕೊಡವಿ ಹಾಕುವಷ್ಟು ಸಂಕುಚಿತವಲ್ಲ ನ್ಯಾಯಾಂಗದ ಭುಜಗಳು. ಭೂಷಣ್ ಅವರ ಈ ಟೀಕೆ ತಮ್ಮ ಸ್ವಂತದ ಹಿತಕ್ಕಾಗಿ ಮಾಡಿರುವಂತಹುದಲ್ಲ. ಒಂದು ವೇಳೆ ಘನತೆಯ ಗಡಿಯನ್ನು ಅಷ್ಟಿಷ್ಟು ಮೀರಿದ್ದರೂ ಅದನ್ನು ರಚನಾತ್ಮಕವಾಗಿ ಸ್ವೀಕರಿಸಬೇಕಿತ್ತು ಸುಪ್ರೀಮ್ ಕೋರ್ಟು.

ಸುಪ್ರೀಮ್ ಕೋರ್ಟಿನ ಆಡಳಿತ ಕೊಳೆತಿದೆ, ದೇಶದಲ್ಲಿ ಜನತಂತ್ರ ಉಳಿಯಬೇಕೆಂದಿದ್ದರೆ ಅದನ್ನು ಸರಿಪಡಿಸಬೇಕು ಎಂದು ೨೦೧೮ರ ಜನವರಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬAತೆ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದರು. ಅಂದಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರ ಯಾವ್ಯಾವ ನ್ಯಾಯಮೂರ್ತಿಗೆ ಯಾವ್ಯಾವ ಕೇಸುಗಳನ್ನು ವಿಚಾರಣೆಗೆ ಒಪ್ಪಿಸಬೇಕೆಂಬ ತೀರ್ಮಾನದಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂಬ ಆಪಾದನೆಯನ್ನು ಈ ಹಿರಿಯ ನ್ಯಾಯಮೂರ್ತಿಗಳು ಮಾಡಿದ್ದರು. ನ್ಯಾಯಾಲಯದ ಘನತೆ ಮಣ್ಣುಪಾಲಾಗುತ್ತದೆಂಬ ಕಾರಣದಿಂದ ವಿವರಗಳನ್ನು ಬಹಿರಂಗಗೊಳಿಸುತ್ತಿಲ್ಲ ಎಂದೂ ಸಾರಿದ್ದರು. ಈ ನಾಲ್ವರ ಪೈಕಿ ಒಬ್ಬರಾದ ರಂಜನ್ ಗೊಗೋಯ್ ಮುಖ್ಯ ನ್ಯಾಯಮೂರ್ತಿಯ ಹುದ್ದೆ ಏರಿದರು. ಅವರ ಮೇಲಿನ ಆಪಾದನೆಗಳು ದೀಪಕ್ ಮಿಶ್ರ ವಿರುದ್ಧ ಮಾಡಿದ್ದ ಆಪಾದನೆಗಳಿಗಿಂತ ಹೀನ ಸ್ವರೂಪದವು.

ಸುಪ್ರೀಮ್ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಮಾತುಗಳನ್ನು ಯಥಾವತ್ ಉಲ್ಲೇಖಿಸುವುದಾದರೆ, “ಗೊಗೋಯ್ (ಅವರನ್ನು ನ್ಯಾಯಮೂರ್ತಿ ಎಂದು ಕರೆಯಲು ನನ್ನ ಮನಸ್ಸು ಒಪ್ಪುವುದಿಲ್ಲ) (ದೀಪಕ್ ಮಿಶ್ರ ಎಸಗಿದ್ದಕ್ಕಿಂತ) ಗಂಭೀರವಾದ, ದೊಡ್ಡದಾದ ದುರ್ವರ್ತನೆಗಳನ್ನು ಪ್ರದರ್ಶಿಸಿದರು. ಅಕ್ಷರಶಃ ಆಳುವ ಬಿಜೆಪಿ ಸರ್ಕಾರದ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಹುತೇಕ ಸುಪ್ರೀಮ್ ಕೋರ್ಟನ್ನು ರಾಜಕೀಯ ಕಾರ್ಯಾಂಗದ ವಶಕ್ಕೆ ಒಪ್ಪಿಸಿದರು. ಜನರ ಹಕ್ಕುಗಳನ್ನು ಕಾಯುವ ಪವಿತ್ರ ಕಾರ್ಯಕ್ಕೆ ಎಳ್ಳು ನೀರು ಬಿಟ್ಟರು. ಆದರೆ ಗೊಗೋಯ್ ಹೀಗೆ ನಡೆದುಕೊಳ್ಳುತ್ತಿದ್ದಾಗ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಂದ ಒಂದೇ ಒಂದು ಭಿನ್ನಮತದ ದನಿಯೂ ಕೇಳಿಬರಲಿಲ್ಲ.”

ಪ್ರಶಾಂತ್ ಭೂಷಣ್ ಟೀಕೆಗೆ ಸುಪ್ರೀಮ್ ಕೋರ್ಟ್ ಈಗ ತಳೆದಿರುವ ನಿಲುವಿನ ತರ್ಕದ ಪ್ರಕಾರ,2018ರಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ವಿರುದ್ಧವೂ ನ್ಯಾಯಾಂಗನಿಂದನೆ ಕ್ರಮ ಜರುಗಿಸಬೇಕು. ಮಾರ್ಕಂಡೇಯ ಕಾಟ್ಜು ಅವರನ್ನೂ ಬಿಡುವಂತಿಲ್ಲ.

ಕೋವಿಡ್-19 ಮಹಾಮಾರಿಯ ಈ ಸಂದರ್ಭದಲ್ಲಿ ಸುಪ್ರೀಮ್ ಕೋರ್ಟು ತನ್ನ ಕಲಾಪಗಳನ್ನು ಎಂದಿನಂತೆ ಕೋರ್ಟುಗಳಲ್ಲಿ ನಡೆಸುತ್ತಿಲ್ಲ. ವಾದ ಮಂಡನೆ- ವಿಚಾರಣೆ ತೀರ್ಪು ಎಲ್ಲವೂ ಕಂಪ್ಯೂಟರ್ ಜಾಲ ಬಳಸಿ ನಡೆಯುತ್ತಿದೆ. 19 ಸಾವಿರಕ್ಕೂ ಹೆಚ್ಚು ಕೇಸುಗಳು ವಿಚಾರಣೆಗೆ ಕಾದಿವೆ. ಇವುಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಗಳು, ಪೌರತ್ವ

ಕಾಯಿದೆ ತಿದ್ದುಪಡಿಯನ್ನು ಪ್ರಶ್ನಿಸುವ ತುರ್ತು ಸ್ವರೂಪದ ಅರ್ಜಿಗಳೂ ಸೇರಿವೆ. ಇವುಗಳೆಲ್ಲವನ್ನೂ ಪಕ್ಕಕ್ಕಿರಿಸಿ ಪ್ರಶಾಂತ್ ಭೂಷಣ್ ಅವರ ವಿರುದ್ಧದ ಪ್ರಕರಣವನ್ನು ಕೈಗೆತ್ತಿಕೊಳ್ಳುವ ತುರ್ತನ್ನು ನಿವೃತ್ತ ನ್ಯಾಯಮೂರ್ತಿಗಳು, ನಿವೃತ್ತ ಹಿರಿಯ ಅಧಿಕಾರಿಗಳೂ ಪ್ರಶ್ನಿಸಿದ್ದಾರೆ.
ಹಾಲಿ ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರ ಅವರು ಪ್ರಧಾನಿ ಮೋದಿಯವರನ್ನು versatile Genius(ಬಹುಮಖ ಮೇಧಾವಿ) ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಹೊಗಳಿದ್ದರು. ಪ್ರಶಾಂತ್ ಭೂಷಣ್ ಅವರು ಮೋದಿಯವರ ಕಟು ಟೀಕಾಕಾರರು ಎಂಬುದು ಜನಜನಿತ. ಆದರೂ ಪ್ರಶಾಂತ್ ವಿರುದ್ಧದ ಈ ಕೇಸನ್ನು ಅರುಣ್ ಮಿಶ್ರ ಅವರ ನ್ಯಾಯಪೀಠಕ್ಕೆ ಒಪ್ಪಿಸಿರುವ ಔಚಿತ್ಯವೂ ಪ್ರಶ್ನಾರ್ಹ.

ತಮ್ಮ ಮೇಲಿನ ಆಪಾದನೆಯ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರ ಅವರಿಲ್ಲದ ಪೀಠಕ್ಕೆ ಒಪ್ಪಿಸಬೇಕು ಮತ್ತು ಶಿಕ್ಷೆಯ ಸ್ವರೂಪ- ಪ್ರಮಾಣದ ಪ್ರಕಟಣೆಯನ್ನು ಮರುವಿಮರ್ಶಾ ಅರ್ಜಿಯ ವಿಚಾರಣೆ ನಡೆಯುವವರೆಗೆ ಮುಂದೂಡಬೇಕು ಎಂಬುದಾಗಿ ಪ್ರಶಾಂತ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗೆ ಬೆಲೆ ಸಿಕ್ಕೀತೇ, ನಿವೃತ್ತ ನ್ಯಾಯಮೂರ್ತಿಗಳು ಸುಪ್ರೀಮ್ ಕೋರ್ಟಿಗೆ ಬೋಧಿಸಿರುವ ವಿವೇಕ ಕೆಲಸ ಮಾಡೀತೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...