Homeಮುಖಪುಟಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು.

- Advertisement -
- Advertisement -

ಸುಪ್ರೀಮ್ ಕೋರ್ಟಿನ ಘನತೆ ಗೌರವಗಳು ಗುರುವಾರ ಅಗ್ನಿಪರೀಕ್ಷೆಗೆ ಗುರಿಯಾಗಲಿವೆ. ನ್ಯಾಯಾಂಗ ನಿಂದನೆಯ ಉರುಳಿಗೆ ಪ್ರಶಾಂತ್ ಭೂಷಣ್ ಅವರ ಕೊರಳನ್ನು ಸಿಕ್ಕಿಸುವುದು ಆಳುವ ಪಟ್ಟಭದ್ರರ ಪ್ರಯತ್ನ. ಯಾಕೆಂದರೆ ಆಳುವವರ ಪಾಲಿಗೆ ಪ್ರಶಾಂತ್ ಬೆಂಬಿಡದೆ ಕಾಡುವ ತೊಣಚಿ. ಜೊತೆಗೆ ನ್ಯಾಯಾಂಗದ ಕಾರ್ಯವೈಖರಿ- ಭ್ರಷ್ಟಾಚಾರದತ್ತ ಕಾಲ ಕಾಲಕ್ಕೆ ಬೆರಳು ಮಾಡಿ ತೋರುತ್ತ, ಅದರ ಅಂತಸ್ಸಾಕ್ಷಿಯನ್ನು ಪಾಟೀಸವಾಲಿಗೆ ಗುರಿ ಮಾಡಿರುವ ದಿಟ್ಟ ನ್ಯಾಯವಾದಿ.

ಸಾಮಾಜಿಕ ಜಾಲತಾಣ ಟ್ವೀಟ್‌ರ್‌ನಲ್ಲಿ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಕುರಿತು ಮತ್ತು ಕಳೆದ ಆರು ವರ್ಷಗಳ ಸುಪ್ರೀಮ್ ಕೋರ್ಟ್ ಕಾರ್ಯವೈಖರಿ ಕುರಿತು ಇತ್ತೀಚೆಗೆ ಎರಡು ಟ್ವೀಟ್‌ಗಳನ್ನು ಮಾಡಿದ್ದರು. ಇವುಗಳಿಂದ ನ್ಯಾಯಾಂಗ ನಿಂದನೆಯಾಗಿದೆ ಎಂಬ ತೀರ್ಮಾನಕ್ಕೆ ಬಂದಿರುವ ಸುಪ್ರೀಮ್ ಕೋರ್ಟ್ ಗುರುವಾರ ಪ್ರಶಾಂತ್ ಅವರಿಗೆ ವಿಧಿಸುವ ಶಿಕ್ಷೆಯ ಸ್ವರೂಪ ಮತ್ತು ಪ್ರಮಾಣವನ್ನು ಪ್ರಕಟಿಸಲಿದೆ.

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು. ಇಷ್ಟಕ್ಕೂ ಪ್ರಶಾಂತ್ ಟ್ವೀಟ್‌ಗಳು ಹೇಳಿದ್ದೇನು ಎಂಬುದನ್ನು ಮತ್ತೊಮ್ಮೆ ನೆನೆದು ನೋಡೋಣ:

ಟ್ವೀಟ್ 1- ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ಕದ ಬಡಿಯುವ ನಾಗರಿಕರ ಪಾಲಿಗೆ ಸುಪ್ರೀಮ್ ಕೋರ್ಟನ್ನು ಲಾಕ್‌ಡೌನ್ ಸ್ಥಿತಿಯಲ್ಲಿ ಇರಿಸಿ ಅವರಿಗೆ ನ್ಯಾಯವನ್ನು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿಯವರು ನಾಗಪುರದ ರಾಜಭವನದಲ್ಲಿ ಬಿಜೆಪಿ ನಾಯಕರೊಬ್ಬರ ಒಡೆತನದ 50 ಲಕ್ಷ ರು ಬೆಲೆ ಬಾಳುವ ಮೋಟರ್ ಸೈಕಲ್ಲನ್ನು ಏರಿ ಕುಳಿತಿದ್ದಾರೆ. ಮಾಸ್ಕ್ ಮತ್ತು ಹೆಲ್ಮೆಟ್ ಕೂಡ ಧರಿಸಿಲ್ಲ.

ಟ್ವೀಟ್ 2- ಅಧಿಕೃತ ತುರ್ತುಪರಿಸ್ಥಿತಿಯನ್ನು ಕೂಡ ಘೋಷಿಸದೆ ಕಳೆದ ಆರು ವರ್ಷಗಳ ಅವಧಿಯಲ್ಲಿ ಭಾರತದ ಜನತಂತ್ರವನ್ನು ಹೇಗೆ ನಾಶ ಮಾಡಲಾಯಿತು ಎಂಬುದನ್ನು ಭವಿಷ್ಯದಲ್ಲಿ ಇತಿಹಾಸಕಾರರು ಹೊರಳಿ ನೋಡಲಿದ್ದಾರೆ. ಆಗ ಅವರು ಈ ವಿನಾಶದಲ್ಲಿ ಸುಪ್ರೀಮ್ ಕೋರ್ಟಿನ, ಅದರಲ್ಲೂ ವಿಶೇಷವಾಗಿ ಕಳೆದ ನಾಲ್ವರು ಮುಖ್ಯನ್ಯಾಯಮೂರ್ತಿಗಳ ಪಾತ್ರವನ್ನು ರೇಖಾಂಕಿತಗೊಳಿಸಿ ಗುರುತಿಸುವರು.

ಕಾಯಿದೆ ಕಾನೂನು ನಿಷ್ಪಕ್ಷಪಾತತೆಯ ಬಟ್ಟೆಯನ್ನು ಕಣ್ಣಿಗೆ ಕಟ್ಟಿಕೊಂಡಿರುವ ನ್ಯಾಯದೇವತೆಗೆ, ದಯೆ, ಕರುಣೆ ಸಹನೆ, ಘನತೆ, ಔದಾರ್ಯ, ಕ್ಷಮೆಯ ಗುಣಗಳೂ ಇರುತ್ತವೆ. ವಿವೇಚನೆಯಿಂದ ಆಕೆ ಅದನ್ನು ಬಳಸುತ್ತಾಳೆ ಕೂಡ. ಆರೋಗ್ಯಕರವಾಗಿ ಜನಪರ ಕಾಳಜಿಗಳೊಂದಿಗೆ ಕೆಲಸ ಮಾಡಲು ಪೂರಕವಾಗುವ ಸಕಾರಾತ್ಮಕ ಟೀಕೆಯನ್ನು ಅಸಹನೆಯಿಂದ ಕೊಡವಿ ಹಾಕುವಷ್ಟು ಸಂಕುಚಿತವಲ್ಲ ನ್ಯಾಯಾಂಗದ ಭುಜಗಳು. ಭೂಷಣ್ ಅವರ ಈ ಟೀಕೆ ತಮ್ಮ ಸ್ವಂತದ ಹಿತಕ್ಕಾಗಿ ಮಾಡಿರುವಂತಹುದಲ್ಲ. ಒಂದು ವೇಳೆ ಘನತೆಯ ಗಡಿಯನ್ನು ಅಷ್ಟಿಷ್ಟು ಮೀರಿದ್ದರೂ ಅದನ್ನು ರಚನಾತ್ಮಕವಾಗಿ ಸ್ವೀಕರಿಸಬೇಕಿತ್ತು ಸುಪ್ರೀಮ್ ಕೋರ್ಟು.

ಸುಪ್ರೀಮ್ ಕೋರ್ಟಿನ ಆಡಳಿತ ಕೊಳೆತಿದೆ, ದೇಶದಲ್ಲಿ ಜನತಂತ್ರ ಉಳಿಯಬೇಕೆಂದಿದ್ದರೆ ಅದನ್ನು ಸರಿಪಡಿಸಬೇಕು ಎಂದು ೨೦೧೮ರ ಜನವರಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬAತೆ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದರು. ಅಂದಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರ ಯಾವ್ಯಾವ ನ್ಯಾಯಮೂರ್ತಿಗೆ ಯಾವ್ಯಾವ ಕೇಸುಗಳನ್ನು ವಿಚಾರಣೆಗೆ ಒಪ್ಪಿಸಬೇಕೆಂಬ ತೀರ್ಮಾನದಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂಬ ಆಪಾದನೆಯನ್ನು ಈ ಹಿರಿಯ ನ್ಯಾಯಮೂರ್ತಿಗಳು ಮಾಡಿದ್ದರು. ನ್ಯಾಯಾಲಯದ ಘನತೆ ಮಣ್ಣುಪಾಲಾಗುತ್ತದೆಂಬ ಕಾರಣದಿಂದ ವಿವರಗಳನ್ನು ಬಹಿರಂಗಗೊಳಿಸುತ್ತಿಲ್ಲ ಎಂದೂ ಸಾರಿದ್ದರು. ಈ ನಾಲ್ವರ ಪೈಕಿ ಒಬ್ಬರಾದ ರಂಜನ್ ಗೊಗೋಯ್ ಮುಖ್ಯ ನ್ಯಾಯಮೂರ್ತಿಯ ಹುದ್ದೆ ಏರಿದರು. ಅವರ ಮೇಲಿನ ಆಪಾದನೆಗಳು ದೀಪಕ್ ಮಿಶ್ರ ವಿರುದ್ಧ ಮಾಡಿದ್ದ ಆಪಾದನೆಗಳಿಗಿಂತ ಹೀನ ಸ್ವರೂಪದವು.

ಸುಪ್ರೀಮ್ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಮಾತುಗಳನ್ನು ಯಥಾವತ್ ಉಲ್ಲೇಖಿಸುವುದಾದರೆ, “ಗೊಗೋಯ್ (ಅವರನ್ನು ನ್ಯಾಯಮೂರ್ತಿ ಎಂದು ಕರೆಯಲು ನನ್ನ ಮನಸ್ಸು ಒಪ್ಪುವುದಿಲ್ಲ) (ದೀಪಕ್ ಮಿಶ್ರ ಎಸಗಿದ್ದಕ್ಕಿಂತ) ಗಂಭೀರವಾದ, ದೊಡ್ಡದಾದ ದುರ್ವರ್ತನೆಗಳನ್ನು ಪ್ರದರ್ಶಿಸಿದರು. ಅಕ್ಷರಶಃ ಆಳುವ ಬಿಜೆಪಿ ಸರ್ಕಾರದ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಹುತೇಕ ಸುಪ್ರೀಮ್ ಕೋರ್ಟನ್ನು ರಾಜಕೀಯ ಕಾರ್ಯಾಂಗದ ವಶಕ್ಕೆ ಒಪ್ಪಿಸಿದರು. ಜನರ ಹಕ್ಕುಗಳನ್ನು ಕಾಯುವ ಪವಿತ್ರ ಕಾರ್ಯಕ್ಕೆ ಎಳ್ಳು ನೀರು ಬಿಟ್ಟರು. ಆದರೆ ಗೊಗೋಯ್ ಹೀಗೆ ನಡೆದುಕೊಳ್ಳುತ್ತಿದ್ದಾಗ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಂದ ಒಂದೇ ಒಂದು ಭಿನ್ನಮತದ ದನಿಯೂ ಕೇಳಿಬರಲಿಲ್ಲ.”

ಪ್ರಶಾಂತ್ ಭೂಷಣ್ ಟೀಕೆಗೆ ಸುಪ್ರೀಮ್ ಕೋರ್ಟ್ ಈಗ ತಳೆದಿರುವ ನಿಲುವಿನ ತರ್ಕದ ಪ್ರಕಾರ,2018ರಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ವಿರುದ್ಧವೂ ನ್ಯಾಯಾಂಗನಿಂದನೆ ಕ್ರಮ ಜರುಗಿಸಬೇಕು. ಮಾರ್ಕಂಡೇಯ ಕಾಟ್ಜು ಅವರನ್ನೂ ಬಿಡುವಂತಿಲ್ಲ.

ಕೋವಿಡ್-19 ಮಹಾಮಾರಿಯ ಈ ಸಂದರ್ಭದಲ್ಲಿ ಸುಪ್ರೀಮ್ ಕೋರ್ಟು ತನ್ನ ಕಲಾಪಗಳನ್ನು ಎಂದಿನಂತೆ ಕೋರ್ಟುಗಳಲ್ಲಿ ನಡೆಸುತ್ತಿಲ್ಲ. ವಾದ ಮಂಡನೆ- ವಿಚಾರಣೆ ತೀರ್ಪು ಎಲ್ಲವೂ ಕಂಪ್ಯೂಟರ್ ಜಾಲ ಬಳಸಿ ನಡೆಯುತ್ತಿದೆ. 19 ಸಾವಿರಕ್ಕೂ ಹೆಚ್ಚು ಕೇಸುಗಳು ವಿಚಾರಣೆಗೆ ಕಾದಿವೆ. ಇವುಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಗಳು, ಪೌರತ್ವ

ಕಾಯಿದೆ ತಿದ್ದುಪಡಿಯನ್ನು ಪ್ರಶ್ನಿಸುವ ತುರ್ತು ಸ್ವರೂಪದ ಅರ್ಜಿಗಳೂ ಸೇರಿವೆ. ಇವುಗಳೆಲ್ಲವನ್ನೂ ಪಕ್ಕಕ್ಕಿರಿಸಿ ಪ್ರಶಾಂತ್ ಭೂಷಣ್ ಅವರ ವಿರುದ್ಧದ ಪ್ರಕರಣವನ್ನು ಕೈಗೆತ್ತಿಕೊಳ್ಳುವ ತುರ್ತನ್ನು ನಿವೃತ್ತ ನ್ಯಾಯಮೂರ್ತಿಗಳು, ನಿವೃತ್ತ ಹಿರಿಯ ಅಧಿಕಾರಿಗಳೂ ಪ್ರಶ್ನಿಸಿದ್ದಾರೆ.
ಹಾಲಿ ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರ ಅವರು ಪ್ರಧಾನಿ ಮೋದಿಯವರನ್ನು versatile Genius(ಬಹುಮಖ ಮೇಧಾವಿ) ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಹೊಗಳಿದ್ದರು. ಪ್ರಶಾಂತ್ ಭೂಷಣ್ ಅವರು ಮೋದಿಯವರ ಕಟು ಟೀಕಾಕಾರರು ಎಂಬುದು ಜನಜನಿತ. ಆದರೂ ಪ್ರಶಾಂತ್ ವಿರುದ್ಧದ ಈ ಕೇಸನ್ನು ಅರುಣ್ ಮಿಶ್ರ ಅವರ ನ್ಯಾಯಪೀಠಕ್ಕೆ ಒಪ್ಪಿಸಿರುವ ಔಚಿತ್ಯವೂ ಪ್ರಶ್ನಾರ್ಹ.

ತಮ್ಮ ಮೇಲಿನ ಆಪಾದನೆಯ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರ ಅವರಿಲ್ಲದ ಪೀಠಕ್ಕೆ ಒಪ್ಪಿಸಬೇಕು ಮತ್ತು ಶಿಕ್ಷೆಯ ಸ್ವರೂಪ- ಪ್ರಮಾಣದ ಪ್ರಕಟಣೆಯನ್ನು ಮರುವಿಮರ್ಶಾ ಅರ್ಜಿಯ ವಿಚಾರಣೆ ನಡೆಯುವವರೆಗೆ ಮುಂದೂಡಬೇಕು ಎಂಬುದಾಗಿ ಪ್ರಶಾಂತ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗೆ ಬೆಲೆ ಸಿಕ್ಕೀತೇ, ನಿವೃತ್ತ ನ್ಯಾಯಮೂರ್ತಿಗಳು ಸುಪ್ರೀಮ್ ಕೋರ್ಟಿಗೆ ಬೋಧಿಸಿರುವ ವಿವೇಕ ಕೆಲಸ ಮಾಡೀತೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...