Homeಚಳವಳಿಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ ಎಂದು ವಕೀಲರಾದ ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರ ವಿರುದ್ಧ ನೀಡಿದ ತೀರ್ಪನ್ನು ಪುನರ್ ಪರಿಶೀಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲಾ ಪ್ರಗತಿಪರ ವಕೀಲರು ಮನವಿ ಸಲ್ಲಿಸಬೇಕೆಂದು ಪ್ರಗತಿಪರ ಚಿಂತಕ ವಕೀಲರ ವೇದಿಕೆಯ ಸಂಚಾಲಯಕರಾದ ಅನೀಸ್ ಪಾಶರವರು ಕರೆ ನೀಡಿದ್ದಾರೆ.

14-08-2020 ರಂದು ಸರ್ವೋಚ್ಚ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರು ತಪ್ಪಿತಸ್ತರೆಂದು ತೀರ್ಪು ನೀಡಿರುತ್ತದೆ. ಈ ತೀರ್ಪು ಇಡೀ ವಕೀಲ ವೃಂದದಲ್ಲಿ ಸಂಚಲನವನ್ನು ಮೂಡಿಸಿದ್ದು, ತುಂಬಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೇಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಎಂಬ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ದೇಶದ ಇತಿಹಾಸವನ್ನು ಗಮನಿಸಿದರೆ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿತ್ತು, ಸಂವಿಧಾನವನ್ನು ರಚನೆ ಮಾಡಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರೂ ಕೂಡ ಒಬ್ಬ ವಕೀಲರಾಗಿದ್ದರು. ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ದೇಶದ ಏಕತೆ ಮತ್ತು ಅಖಂಡತೆ ಮತ್ತು ನ್ಯಾಯಾದಾನದ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ.
ಕೊರೋನ ಕಾಯಿಲೆ ಸಲುವಾಗಿ ನ್ಯಾಯಾಲಯಗಳಲ್ಲಿ ತುರ್ತು ವಿಷಯಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳದೆ ಇರುವುದರಿಂದ ದೇಶದ ಹೆಚ್ಚಿನ ವಕೀಲರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ತುರ್ತು ಪ್ರಕರಣಗಳನ್ನು ಕೂಡ ಆನ್ ಲೈನ್ ಮುಖಾಂತರ ಮಂಡನೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಹಳೆಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವುದನ್ನು ಬಿಟ್ಟು ಹೊಸ ಪ್ರಕರಣವನ್ನು ತರಾತುರಿಯಲ್ಲಿ ಕೈಗೆತ್ತಿಕೊಂಡು ತೀರ್ಪು ನೀಡಿರುವುದು ಇಡೀ ಭಾರತ ದೇಶದ ಜನತೆಗೆ ಆಶ್ಚರ್ಯಚಕಿತರನ್ನಾಗಿಸಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಮತ್ತು ವಕೀಲ ವೃಂದದ ಘನತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರಾದ ನಮ್ಮ ಮೇಲೆ ಹೆಚ್ಚು ಇದೆ. ಹಾಗಾಗಿ ಎಲ್ಲರೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ ಎಂದು ಹೇಳಿಕೆಯಲ್ಲಿ ಅನೀಸ್ ಪಾಶ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ರವರು ತಮ್ಮ ಟ್ವೀಟ್‌ಗಳಲ್ಲಿ ಆರೋಪಿಸಿದಂತಹ ಅಂಶಗಳು ಸರಿಯೋ ತಪ್ಪೋ ಎಂದು ತನಿಖೆ ಮಾಡಲು ಒಂದು ನ್ಯಾಯಮೂರ್ತಿಗಳ ತಂಡವನ್ನು ರಚಿಸಬೇಕೆಂದು, ತದನಂತರದಲ್ಲಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಕಂಡುಬಂದಾಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ವಿಧಿಸಿದರೆ ಇಡೀ ಭಾರತ ದೇಶದ ಜನತೆ ನ್ಯಾಯಾಲಯದ ಮೇಲೆ ಇಟ್ಟಿರುವ ಗೌರವ ಮತ್ತು ಘನತೆಯು ಇನ್ನೂ ಹೆಚ್ಚಾಗುವುದು ಹಾಗೂ ಸಂವಿಧಾನ ನಮಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಪ್ರಜಾ ಪ್ರಭುತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಂತಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳ ಮತ್ತು ವಕೀಲ ವೃಂದದ ಗೌರವವನ್ನು ಹೆಚ್ಚಿಸಲು ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು ನಾವೆಲ್ಲ ಈ ತಕ್ಷಣ ಕಾರ್ಯಪ್ರವೃತ್ತರಾಗಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ರಿಜಿಸ್ಟ್ರಾರ್ ರವರ ಮೂಲಕ ದಿನಾಂಕ:14-8-2020 ರಂದು ಪ್ರಶಾಂತ್ ಭೂಷಣ್ ರವರ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ಪ್ರಶಾಂತ್ ಭೂಷಣ್ ರವರು ಆರೋಪಿಸಿರುವ ಆರೋಪಗಳನ್ನು ಕೂಲಂಕುಂಶವಾಗಿ ತನಿಖೆ ಮಾಡಬೇಕು ಎಂದು ಇ-ಮೇಲ್ ಮೂಲಕ ಮನವಿ ಸಲ್ಲಿಸಲು ಎಲ್ಲಾ ಪ್ರಗತಿಪರ ವಕೀಲರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಎಸಗಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...